ರಾಜಾಹುಲಿ ಎಂದೇ ಪ್ರಸಿದ್ದಿಯಾಗಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇದೀಗ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.
ನೈಜ ಘಟನೆಯಾಧಾರಿತ ಸಾಮಾಜಿಕ ಕಳಕಳಿಯ ‘ತನುಜಾ’ ಚಿತ್ರದಲ್ಲಿ ಯಡಿಯೂರಪ್ಪ ನಟಿಸುತ್ತಿದ್ದಾರೆ. ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಹರೀಶ್ ಎಂಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ತನುಜಾ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಯಡಿಯೂರಪ್ಪ ನಟಿಸಲಿದ್ದಾರೆ ಎಂಬುದನ್ನು ಮಾತ್ರ ಚಿತ್ರತಂಡ ಹೇಳಿದೆ. ಆದ್ರೆ ಯಾವ ಪಾತ್ರ ಎಂಬ ಗುಟ್ಟನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದ್ರೆ, ಚಿತ್ರದಲ್ಲಿ ಮುಖ್ಯಮಂತ್ರಿಗಳ ಪಾತ್ರದಲ್ಲಿ ಯಡಿಯೂರಪ್ಪ ಅವರು ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಚಿತ್ರೀಕರಣದಲ್ಲಿ ಯಡಿಯೂರಪ್ಪ ಅವರು ಭಾಗಿಯಾಗಿರುವ ಕೆಲ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಾಜಾಹುಲಿಯ ಅಭಿಮಾನಿಗಳು ಸಂತಸದಿಂದ ಶೇರ್ ಮಾಡಿಕೊಳ್ಳುತ್ತಿದ್ದಾರೆ.
ಇನ್ನು, ಬಿಎಸ್ ಯಡಿಯೂರಪ್ಪನವರು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ನೆಲೆ ತಂದುಕೊಟ್ಟಿದ್ದಾರೆ. ಆ ಮೂಲಕ ದಕ್ಷಿಣ ಭಾರತದ ರಾಜ್ಯವೊಂದರ ಮೊದಲ ಬಿಜೆಪಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿ 4 ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.