Sunday, May 18, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಮೂಡಬಿದ್ರೆಯಲ್ಲಿ ಅದ್ದೂರಿ ರಾಜ್ಯ ಮಟ್ಟದ ವಲಯ ಜೈನ್ ಮಿಲನ್ ಸಮ್ಮೇಳನ

PratikshanaNews by PratikshanaNews
17th October 2022
in News
0
ಮೂಡಬಿದ್ರೆಯಲ್ಲಿ ಅದ್ದೂರಿ ರಾಜ್ಯ ಮಟ್ಟದ ವಲಯ ಜೈನ್ ಮಿಲನ್ ಸಮ್ಮೇಳನ
0
SHARES
2
VIEWS
Share on FacebookShare on Twitter

ಭಾರತೀಯ ಜೈನ್ ಮಿಲನ್ ಅವರ 19 ನೇ ವಲಯ ಸಮ್ಮೇಳನ ಮೂಡುಬಿದಿರೆಯ ಎಕ್ಸ್ ಲೆಂಟ್ ಕಾಲೇಜಿನ ಸಭಾಂಗಣದಲ್ಲಿ ವೈಭವವಾಗಿ ಜರಗಿತು.

ಸಮಾರಂಭದಲ್ಲಿ ಆಶೀರ್ವಚನವನ್ನು ದಯಪಾಲಿಸಿದ ಕಾರ್ಕಳ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹಾಗೂ ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಆಶೀರ್ವಚನವನ್ನು ದಯಪಾಲಿಸಿ ಧರ್ಮ ಪರಂಪರೆ, ಸಂಸ್ಕೃತಿ ಮನುಷ್ಯನ ಬದುಕಿಗೆ ಪೂರಕವಾಗಿರಬೇಕು ಹಾಗೂ ಇದು ಸಮಾಜದ ಸ್ವಾಸ್ಥ್ಯಕ್ಕೂ ಪ್ರೇರಣೆಯಾಗುತ್ತದೆ ಎಂದರು. ಜನಮಾನಸದಲ್ಲಿ ಅಹಿಂಸೆಯ ಪಾಲನೆ ಅತೀ ಅಗತ್ಯವಾಗಿದ್ದು ಇದು ವಿಶ್ವಶಾಂತಿಗೆ ಮೂಲ ಎಂದು ಸ್ವಾಮೀಜಿದ್ವಯರು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಾತನಾಡುತ್ತಾ ಜೈನ್ ಮಿಲನ್ ಕಾರ್ಯಗಳನ್ನು ಪ್ರಶಂಸಿದರು. ಸಮಾಜದ ಸಂಘಟನೆ ಸಮುದಾಯದ ಪ್ರಗತಿಗೆ ಸಹಾಯಕ ಎಂದರು. ಸಮಾಜ ಸಂಘಟನೆಗಳು ಮಾನವೀಯತೆಯ ಪ್ರತೀಕವಾಗಿ ಕೆಲಸಗಳನ್ನು ಮಾಡಬೇಕು ಹಾಗೂ ಸಮಾಜದ ಅಭ್ಯುದಯಕ್ಕೆ ನೆರವಾಗಬೇಕು ಎಂದರು.

ADVERTISEMENT

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವರಾದ ಶ್ರೀ ಸುನಿಲ್ ಕುಮಾರ್ ಮಾತನಾಡಿ ಮೂಡುಬಿದಿರೆ ಜೈನ ಕಾಶಿಯಾಗಿದ್ದು ಕಾರ್ಕಳ ಹಾಗೂ ಮೂಡುಬಿದಿರೆ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ಜೈನ ಧರ್ಮದ ಪ್ರಭಾವ ನನ್ನ ಮೇಲಾಗಿದ್ದು ಜೈನ ಧರ್ಮದ ವಿಚಾರಗಳು ಸಮಾಜದ ಹಿತದಲ್ಲಿ ಅಪೂರ್ವ ಕೊಡುಗೆಯಾಗಿದೆ ಎಂದರು

ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಡಿ ಸುರೇಂದ್ರ ಕುಮಾರ್ ಧರ್ಮಸ್ಥಳ ಅವರು ಮಾತನಾಡುತ್ತಾ ಜೈನ್ ಮಿಲನ್ ನಂತಹ ಸಂಘಟನೆಗಳು ಸಮಾಜದ ಉನ್ನತೀಕರಣಕ್ಕೆ ಹಾಗೂ ಏಕತ್ವದ ಭಾವನೆಯನ್ನು ಮೂಡಿಸುತ್ತದೆ. ಎಲ್ಲರೂ ಒಗ್ಗಟ್ಟಾಗಿ ಮುಂದುವರೆದಾಗ ದೇಶದ ಅಭಿವೃದ್ಧಿಗೂ ಸಹಾಯಕವಾಗುತ್ತದೆ ಎಂದರು. ಮುಂದಿನ ವಲಯ ಸಮ್ಮೇಳನವು ಕೇರಳದ ವೈನಾಡಿನಲ್ಲಿ ನಡೆಯಲಿದೆ ಎಂದು ಘೋಷಿಸಿದರು.

ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಜೈನ್ ಮಿಲನ್ ಮೂಲಕ ಜಿನ ಭಜನಾ ಸ್ಪರ್ಧೆ ಏರ್ಪಡಿಸುವ ಮೂಲಕ ಸಮಾಜವು ವಿಭಜನೆಯಾಗದೇ ಒಗ್ಗಟ್ಟಾಗಿರುತ್ತದೆ ಎಂದರು. ಮುಂದಕ್ಕೆ ಜೈನ್ ಮಿಲನ್ ವತಿಯಿಂದ ಸಂಸ್ಕಾರ ಶಿಬಿರ ನಡೆಸಲಾಗುವುದು ಎಂದರು.

ಎಕ್ಸ್ ಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ಮಿಲನಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಇವರಿಗೆ ರಾಜ್ಯ ಮಟ್ಟದ ಸಾಧಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ADVERTISEMENT

ಸಮಾರಂಭದಲ್ಲಿ ಮಾಜಿ ಸಚಿವ ಶ್ರೀ ಅಭಯಚಂದ್ರ ಜೈನ್ , ರಾಜ್ಯ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಎಮ್ ಎನ್ ರಾಜೇಂದ್ರ ಕುಮಾರ್, ಶ್ರೀ ಪ್ರಸನ್ನ ಕುಮಾರ್ ಉಡುಪಿ, ಇ ವಿ ಅಜ್ಜಪ್ಪ ಹೊಸದುರ್ಗ, ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಎಂ ಎಸ್ ಮೃತ್ಯುಂಜಯ್ ಜೈನ್ ಮೈಸೂರು, ಎಕ್ಸ್ ಲೆಂಟ್ ಯುವರಾಜ್ ಜೈನ್ ಮೂಡುಬಿದಿರೆ, ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ ಉಪನ್ಯಾಸಗೈದರು.

ಜೈನ್ ಮಿಲನ್ ವಲಯ ೮ ರ ಅಧ್ಯಕ್ಷರಾದ ಪುಷ್ಪರಾಜ್ ಜೈನ್ ಸ್ವಾಗತಿಸಿದರು. ರಾಜೇಶ್ ಎಂ ವಂದಿಸಿದರು. ರಾಜ್ಯದ ವಿವಿಧ ಕಡೆಗಳ ಮಿಲನ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಜೈನ್ ಮಿಲನ್ ಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಹಸ್ರಾರು ಜೈನ ಬಾಂಧವರು ಕಾರ್ಯಕ್ರಮದಲ್ಲಿ ಸಂತಸ ಸಡಗರದಿಂದ ಪಾಲ್ಗೊಂಡಿದ್ದರು. ಸುದರ್ಶನ್ ಜೈನ್ ಬಂಟ್ವಾಳ , ನಮಿರಾಜ್ ಜೈನ್ ಮೂಡುಬಿದಿರೆ, ರಶ್ಮಿತಾ ಯುವರಾಜ್ ಮೂಡುಬಿದಿರೆ ಮುಂತಾದ ಜೈನ್ ಮಿಲನ್ ಸದಸ್ಯರುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದ ಮುನ್ನಾದಿನ ಸಾವಿರ ಕಂಬದ ಬಸದಿಯಲ್ಲಿ ಲಕ್ಷದೀಪೋತ್ಸವವನ್ನು ಬಹಳ ಭಕ್ತಿಭಾವದಿಂದ ಆಚರಿಸಲಾಯಿತು. ಮಕ್ಕಿಮನೆ ಕಲಾವೃಂದ ತಂಡ ಮತ್ತು ಇತರರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Jain MilanJain Milan Moodabidre
ADVERTISEMENT
Previous Post

Tears – ಕಣ್ಣೀರು ಒಳ್ಳೆಯದೇ.. ಏನೆಲ್ಲಾ ಲಾಭ ಗೊತ್ತಾ?

Next Post

ಉಜಿರೆ: ಡಾ. ನವೀನ್ ಕುಮಾರ್ ಜೈನ್ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಉಜಿರೆ: ಡಾ. ನವೀನ್ ಕುಮಾರ್ ಜೈನ್ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

ಉಜಿರೆ: ಡಾ. ನವೀನ್ ಕುಮಾರ್ ಜೈನ್ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!