ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಬಜರಂಗದಳು ಯುವಕ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 12 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರ್ಷ ಕೊಲೆಗೆ ಮೂರು ದಿನಗಳಿಂದ ಸ್ಕೆಚ್ ಹಾಕಿದ್ದ 12 ಕ್ಕೂ ಹೆಚ್ಚು ಆರೋಪಿಗಳು ಹರ್ಷನನ್ನು ಹತ್ಯೆಗೈದು ಪರಾರಿಯಾಗಿದ್ದರು. ಈ ವೇಳೆ ಎಲ್ಲರೂ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.
ಆರೋಪಿಗಳು ಹರ್ಷನ ಚಲನವಲನಗಳನ್ನು ಹಲವು ದಿನಗಳಿಂದ ಗಮನಿಸುತ್ತಿದ್ದರು. ಘಟನೆ ನಡೆದ ದಿನ ಬೆಳಿಗ್ಗೆಯಿಂದಲೇ ಹರ್ಷನನ್ನು ಓರ್ವ ಹಿಂಬಾಲಿಸುತ್ತಿದ್ದ. ಹರ್ಷ ಒಬ್ಬಂಟಿಯಾಗಿ ಸಿಕ್ಕಾಗ ಇರಿದು ಕೊಲೆ ಮಾಡಿದ್ದಾರೆ.
ಹತ್ಯೆ ನಡೆದ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರವೇ 3 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಅನಂತರ 7 ಜನರನ್ನು ಪೊಲೀಸ್ ಸರ್ಕಲ್ ಇನ್ಸ್ಸ್ಪೆಕ್ಟರ್ಗಳಾದ ಅಭಯ್ ಪ್ರಕಾಶ್, ಗುರುರಾಜ್ ಹಾಗೂ ಅತೀಶ್ ತಂಡಗಳು ಬಂಧಿಸಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
https://youtu.be/b6pHcxpYXVU