Saturday, May 10, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ವಕೀಲ ಜಗದೀಶ್ ಬಂಧನ : ಕೆಆರ್​ಎಸ್​ ಪಕ್ಷದಿಂದ ಖಂಡನೆ

by
13th February 2022
in News
0
ವಕೀಲ ಜಗದೀಶ್ ಬಂಧನ : ಕೆಆರ್​ಎಸ್​ ಪಕ್ಷದಿಂದ ಖಂಡನೆ
0
SHARES
0
VIEWS
Share on FacebookShare on Twitter
ವಕೀಲ ಜಗದೀಶ್ ಕೆಎನ್ ಮಹಾದೇವ್ ಅವರನ್ನು ಇಂದು ಬೆಳ್ಳಂಬೆಳಿಗ್ಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇವರ ಬಂಧನವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸಿದೆ.
ಈ ಬಗ್ಗ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು, ಸಚಿವರೊಬ್ಬರು ತನ್ನನ್ನು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ಕಳೆದ ವರ್ಷ ದೂರು ನೀಡಿದ್ದ ಮಹಿಳೆಗೆ ಕೆಲ ದಿನ ವಕೀಲರಾಗಿದ್ದ ಹಾಗೂ ಈಗ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಮೇಲೆ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿರುವ ಪ್ರಕರಣದ ಸುತ್ತಮುತ್ತ ಸಾಕಷ್ಟು ಸಾಕ್ಷ್ಯಗಳನ್ನು ಕಲೆಹಾಕಿ ಜನಾಭಿಪ್ರಾಯವನ್ನು ರೂಪಿಸುತ್ತಾ ಬಂದಿರುವ ಬೆಂಗಳೂರಿನ ವಕೀಲ ಜಗದೀಶ್ ಕೆಎನ್ ಮಹಾದೇವ್ ಒಂದು ರೀತಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದ್ದಾರೆ.
ದುರದೃಷ್ಟವಶಾತ್, ಅವರ ಕೆಲವೊಂದು ಪ್ರಚೋದನಾತ್ಮಕ ಮಾತುಗಳೂ ಕಾರಣವಾಗಿ ಮೊನ್ನೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್’ನ ಆವರಣದಲ್ಲಿ ಅವರ ಅಪ್ರಾಪ್ತ ವಯಸ್ಸಿನ ಮಗನ ಮೇಲೆ ವಕೀಲರ ಕೋಟು ಧರಿಸಿದ್ದ ಕೆಲವರು ಬಹಳ ಕೆಟ್ಟದಾಗಿ ಹಲ್ಲೆ ಮಾಡಿದ್ದಾರೆ. ಹುಡುಗ ಎಂದೂ ನೋಡದೆ ಹೀನಾಯವಾಗಿ ದೈಹಿಕ ದೌರ್ಜನ್ಯ ಎಸಗಿದ್ದಾರೆ. ಸಮಯಕ್ಕೆ ಸರಿಯಾಗಿ ಪೊಲೀಸರು ಬಂದು ಆ ಹುಡುಗನನ್ನು ರಕ್ಷಿಸದೆ ಇದ್ದಿದ್ದರೆ ಬಹುಶಃ ಆ ಹುಡುಗ ಜೀವಂತ ಉಳಿಯುತ್ತಿರಲಿಲ್ಲ ಎನ್ನಿಸುವಷ್ಟು ಕ್ರೂರ ವಾತಾವರಣ ಅಲ್ಲಿ ನಿರ್ಮಾಣವಾಗುತ್ತಿತ್ತೇನೋ. ಜಗದೀಶರ ಪರವಾಗಿ ಅಲ್ಲಿ ಹೋಗಿದ್ದ ಇನ್ನೂ ಕೆಲವರ ಮೇಲೆ ಇದೇ ರೀತಿಯ ಹಲ್ಲೆ ಆಗಿದೆ ಎಂದು ಹೇಳಲಾಗುತ್ತಿದೆ.
ಇನ್ನೊಬ್ಬರ ಮೇಲೆ ಎಷ್ಟೇ ಅಸಹನೆ ಮತ್ತು ಭಿನ್ನಾಭಿಪ್ರಾಯ ಇದ್ದರೂ ಹೀಗೆ ಹಲ್ಲೆ ಮಾಡುವುದು ತಪ್ಪು ಮತ್ತು ಕಾನೂನುಬಾಹಿರ. ವಕೀಲರೇ ಹೀಗೆ ನ್ಯಾಯಾಲಯದ ಆವರಣದಲ್ಲಿ ದೌರ್ಜನ್ಯ ಎಸಗಿರುವುದನ್ನು ಇಡೀ ವಕೀಲ ಸಮೂಹ ಗಂಭೀರವಾಗಿ ಪರಿಗಣಿಸಬೇಕು ಮತ್ತು ಪೊಲೀಸರು ಈ ಕೂಡಲೇ ಕ್ರಮ ಕೈಗೊಂಡು ಹಲ್ಲೆ ಮಾಡಿದವರನ್ನು ಬಂಧಿಸಬೇಕು.
ಆದರೆ ಹಾಗೆ ಆಗದೆ, ಇಂದು ಬೆಳ್ಳಂಬೆಳಗ್ಗೆ ವಕೀಲ ಜಗದೀಶ್’ರ ಮನೆಗೆ ಹೋಗಿರುವ ಪೊಲೀಸ್ ತಂಡ ಅವರನ್ನು ಬಂಧಿಸಿ ಕರೆದೊಯ್ದಿದೆ ಎಂಬ ಮಾಹಿತಿ ಇದೆ.
ಇದೆಲ್ಲವನ್ನೂ ಗಮನಿಸಿದಾಗ, ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿರುವ ಕಾರಣಕ್ಕೆ ಹೀಗೆಲ್ಲಾ ಆಗುತ್ತಿದೆ ಎನ್ನುವ ಮಾತಿಗೆ ಪುಷ್ಟಿ ಕೊಡುವ ರೀತಿಯಲ್ಲಿ ಘಟನೆಗಳು ನಡೆಯುತ್ತಿರುವುದು ತೀರಾ ಕಳವಳಕಾರಿ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಭ್ರಷ್ಟಾಚಾರದ ವಿರುದ್ಧ ಮತ್ತು ಮೌಲ್ಯಾಧಾರಿತ ರಾಜಕಾರಣಕ್ಕಾಗಿ ಸಂಘಟಿತ ಹೋರಾಟವನ್ನು ಮಾಡುತ್ತಾ ಬಂದಿದೆ. ಅಂತಹ ಹೋರಾಟದ ಕಾರಣಕ್ಕೆ KRS ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ಮೇಲೆ ಭ್ರಷ್ಟ ಅಧಿಕಾರಿಗಳು ಮತ್ತು ಪೊಲೀಸರು ಹತ್ತಾರು ಕಡೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿದ್ದಾರೆ ಹಾಗೂ ಪಕ್ಷದ ಹಲವಾರು ಸೈನಿಕರು ಬಂಧನಕ್ಕೂ ಒಳಗಾಗಿ ಜೈಲಿಗೂ ಹೋಗಿ, ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಎಲ್ಲಾ ಸಂದರ್ಭಗಳಲ್ಲಿ ರಾಜ್ಯದ ಹತ್ತಾರು ನ್ಯಾಯವಾದಿಗಳು ಯಾವುದೇ ಪೀಜು ತೆಗೆದುಕೊಳ್ಳದೆ ನಮ್ಮ ಪರವಾಗಿ ವಾದಿಸಿದ್ದಾರೆ ಮತ್ತು ನಮ್ಮ ಹೋರಾಟವನ್ನು ಬೆಂಬಲಿಸಿದ್ದಾರೆ. ಅವರೆಲ್ಲರಿಗೂ KRS ಪಕ್ಷವು ಧನ್ಯವಾದಗಳನ್ನು ಅರ್ಪಿಸುತ್ತದೆ.
ಈ ಎಲ್ಲದರ ಹಿನ್ನೆಲೆಯಲ್ಲಿ, ವಕೀಲ ಜಗದೀಶರ ಅಪ್ರಾಪ್ತ ವಯಸ್ಸಿನ ಮಗನ ಮೇಲೆ ಆಗಿರುವ #ಹಲ್ಲೆ, ಆ ಪ್ರಕರಣದಲ್ಲಿ ಪೊಲೀಸರ #ನಿಷ್ಕ್ರಿಯತೆ, ಈಗ ಸದ್ಯ ಜಗದೀಶ್ ಅವರನ್ನು ಬಂಧಿಸಿರುವ ಪೊಲೀಸರ ಪಕ್ಷಪಾತಿತನದ ರೀತಿ, ಇವೆಲ್ಲವನ್ನೂ KRS ಪಕ್ಷವು ಖಂಡಿಸುತ್ತದೆ ಮತ್ತು ಭ್ರಷ್ಟಾಚಾರದ ವಿರುದ್ಧ ಸಂಯಮದಿಂದ, ಶಿಸ್ತಿನಿಂದ ಮತ್ತು ಸಂಘಟಿತವಾಗಿ ಹೋರಾಟ ಮಾಡುವವರ ಬೆಂಬಲಕ್ಕೆ ನಿಲ್ಲುತ್ತದೆ. ರಾಜ್ಯದ ನ್ಯಾಯವಾದಿ ಮತ್ತು ವಕೀಲ ಸಮೂಹವು ಸಹ ಈ ಪ್ರಕರಣವನ್ನು ಘನತೆ ಮತ್ತು ನ್ಯಾಯಪರತೆಯಿಂದ ನಿಭಾಯಿಸಬೇಕು ಎಂದು ಅವರನ್ನು ಕೋರುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ADVERTISEMENT
ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಹಿಜಾಬ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್​ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

Next Post

ವಕೀಲ ಜಗದೀಶ್ ಪುತ್ರನ ಮೇಲೆ ಎಫ್ ಐ ಆರ್ ದಾಖಲು

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ವಕೀಲ ಜಗದೀಶ್ ಪುತ್ರನ ಮೇಲೆ ಎಫ್ ಐ ಆರ್ ದಾಖಲು

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!