No Result
View All Result
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಲಿದ್ದಾರೆ.
ಯು ಟಿ ಖಾದರ್ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿರಿತನ ಪರಿಗಣಿಸಿ ಖಾದರ್ ಅವರನ್ನು ಸ್ಪೀಕರ್ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
ಯು ಟಿ ಖಾದರ್ ಅವರು ಈ ಹಿಂದೆ ಆರೋಗ್ಯ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು. ಕಳೆದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕರೂ ಆಗಿದ್ದರು,
ಆಡಳಿತ ಪಕ್ಷದವರೇ ಸ್ಪೀಕರ್ ಆಗುವುದು ಮತ್ತು ಸ್ಪೀಕರ್ ಆಯ್ಕೆ ಸರ್ವಾನುಮತದಿಂದ ನಡೆಯುವುದು ವಿಧಾನಸಭೆಯಲ್ಲಿ ನಡೆದುಕೊಂಡು ಬಂದಿರುವ ಪದ್ಧತಿ.
ಇವತ್ತು ಬೆಳಗ್ಗೆ 10.30ಕ್ಕೆ ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
No Result
View All Result
error: Content is protected !!