ವಿಧಾನಸಭಾ ಚುನಾವಣೆ ಸಮೀಪಿಸ್ತಿರುವ ಹೊತ್ತಲ್ಲೇ ಹಾಸನ ಜಿಲ್ಲೆಯಲ್ಲೇ ಬಿಜೆಪಿ ನಾಯಕ ಎ ಮಂಜು ಅವರು ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ.
ಎ ಮಂಜು ಅವರು ಅಧಿಕೃತವಾಗಿ ಬಿಜೆಪಿಗೆ ವಿದಾಯ ಹೇಳಿ ಜೆಡಿಎಸ್ಗೆ ಸೇರ್ಪಡೆ ಆಗಲಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭದ್ರಕೋಟೆಯಲ್ಲಿ ಪಕ್ಷಾಂತರ ಪರ್ವ ಬಿರುಸು ಪಡೆಯಲಿದೆ.
ಜೆಡಿಎಸ್ನಿಂದ ಅರಕಲಗೂಡು ವಿಧಾನಸಭಾ ಕ್ಷೇತ್ರಕ್ಕೆ ಎ ಮಂಜು ಅವರು ಅಭ್ಯರ್ಥಿ ಆಗುವ ನಿರೀಕ್ಷೆ ಇದೆ. ಹಾಲಿ ಶಾಸಕರಾಗಿರುವ ಎ ಟಿ ರಾಮಸ್ವಾಮಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ಗೆ ಹೋಗಬಹುದು ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಂಜು ಅವರು ಜೆಡಿಎಸ್ಗೆ ಹೋಗಿ ಆ ಪಕ್ಷದಿಂದ ಸ್ಪರ್ಧೆ ಮಾಡಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಮಾಜಿ ಸಚಿವ ಎ ಮಂಜು ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದಿದ್ದರು.
2014ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿ ಸ್ಪರ್ಧಿಸಿ ದೇವೇಗೌಡರ ವಿರುದ್ಧ ಸೋತರು.
2019ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತರು.
ವಿಶೇಷ ಅಂದ್ರೆ ಎ ಮಂಜು ಅವರು ಬಿಜೆಪಿಯಲ್ಲಿರುವಾಗಲೇ ಅವರ ಪುತ್ರ ಡಾ ಮಂಥರ್ಗೌಡ ಅವರು ಕೊಡಗು ವಿಧಾನಪರಿಷತ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋತರು.