ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ವಿರುದ್ಧ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ದೇಗುಲ ನಗರಿ ಉಡುಪಿ ಬಗ್ಗೆ ಸಾವಿರಾರು ವರ್ಷಗಳ ಲಿಖಿತ ಇತಿಹಾಸ ಇದೆ. ನಿಮಗೆ ಏನೂ ಗೊತ್ತಿಲ್ಲದ ಮೇಲೆ ಸಾರ್ವಜನಿಕ ವೇದಿಕೆಯಲ್ಲಿ ತಲೆಹರಟೆ ಮಾತುಗಳನ್ನು ಮಾತಾಡುವುದು ಯಾಕೆ..?
ಎಂದು ಮಿಥುನ್ ರೈ ವಿರುದ್ಧ ರಕ್ಷಿತ್ ಶೆಟ್ಟಿ ಟ್ವೀಟಿಸಿದ್ದಾರೆ.
The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023
ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್ ರೈ ‘ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರುಗಳು’ ಎಂಬ ಹೇಳಿಕೆ ನೀಡಿದ್ದು ವಿವಾದವಾಗಿತ್ತು.
ಇತ್ತ ರಕ್ಷಿತ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಪ್ರಶ್ನೆಗಳು ಕೇಳಿದ್ದಾರೆ.