Saturday, May 24, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ದನಗಾಹಿಯಿಂದ ಹಿಡಿದು 2ನೇ ಬಾರಿ ಮುಖ್ಯಮಂತ್ರಿ ಆಗುವ ತನಕ.. ಇದು ಸಮಾಜವಾದಿ ಸಿದ್ದರಾಮಯ್ಯ ಕತೆ

PratikshanaNews by PratikshanaNews
18th May 2023
in News, Special
0
ದನಗಾಹಿಯಿಂದ ಹಿಡಿದು 2ನೇ ಬಾರಿ ಮುಖ್ಯಮಂತ್ರಿ ಆಗುವ ತನಕ.. ಇದು ಸಮಾಜವಾದಿ ಸಿದ್ದರಾಮಯ್ಯ ಕತೆ
0
SHARES
2
VIEWS
Share on FacebookShare on Twitter

ವಿಶೇಷ ವರದಿ

ಸಮಾಜವಾದಿಯಲ್ಲಿ ತಮ್ಮ ರಾಜಕೀಯ ಜೀವನವನ್ನು ಶುರು ಮಾಡಿದ ಸಿದ್ದರಾಮಯ್ಯ ಅವರ ರಾಜಕೀಯ ಜೀವಿತಾವಧಿಯಲ್ಲಿ ಅನೇಕ ತಿರುವುಗಳು ಘಟಿಸಿವೆ.

ಒಂದೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಪ್ರತ್ಯರ್ಥಿಯಾಗಿದ್ದರು. ನಂತರ ಅದೇ ಪಕ್ಷವನ್ನು ಸೇರಿ ಮುಖ್ಯಮಂತ್ರಿ ಕೂಡ ಆದರು. ಮತ್ತೊಮ್ಮೆ ಅದೇ ಹುದ್ದೆ ಸಿದ್ದರಾಮಯ್ಯರನ್ನು ವರಿಸಿದೆ.

76 ವರ್ಷದ ಸಿದ್ದರಾಮಯ್ಯಗೆ ರಾಜಕೀಯದಲ್ಲಿ 45 ವರ್ಷದಷ್ಟು ಸುದೀರ್ಘ ರಾಜಕೀಯ ಅನುಭವ ಇದೆ. ಕರ್ನಾಟಕದಲ್ಲಿ ದೇವರಾಜು ಅರಸು ಬಳಿಕ ಐದು ವರ್ಷ ಆಡಳಿತ ನಡೆಸಿದ ಏಕೈಕ ರಾಜಕಾರಣಿ ಸಿದ್ದರಾಮಯ್ಯ.

ಶಾಲೆಗೆ ಹೋಗದಿದ್ದರೂ ಕಾನೂನು ಪದವಿ..

1948ರ ಆಗಸ್ಟ್ 12ರಂದು ಮೈಸೂರು ಜಿಲ್ಲೆಯ ಸಿದ್ದರಾಮನ ಹುಂಡಿಯಲ್ಲಿ ಕೃಷಿಕರ ಕುಟುಂಬದಲ್ಲಿ ಸಿದ್ದರಾಮಯ್ಯ ಜನಿಸಿದರು.

10 ವರ್ಷದವರೆಗೂ ಸಿದ್ದರಾಮಯ್ಯ ಶಾಲೆಯ ಮೆಟ್ಟಿಲನ್ನು ತುಳಿಯಲಿಲ್ಲ. ಹೊಲದಲ್ಲಿ ಅಪ್ಪ-ಅಣ್ಣಂದಿರಿಗೆ ನರವಾಗುತ್ತಾ ದನ ಕಾಯುತ್ತಿದ್ದರಂತೆ.. ಆ ನಂತರ ನೇರವಾಗಿ ಐದನೇ ತರಗತಿಗೆ ಪ್ರವೇಶ ಪಡೆದ ಸಿದ್ದರಾಮಯ್ಯ ಮುಂದೆ ಕಾನೂನು ಪದವಿ ಕೂಡ ಪಡೆದರು.

ಸಿದ್ದರಾಮಯ್ಯ ಅವರು ಓಬಿಸಿ ವರ್ಗಕ್ಕೆ ಸೇರಿದ ಕುರುಬ ಸಮುದಾಯದವರು. ಕರ್ನಾಟಕದಲ್ಲಿ ಈ ಸಮುದಾಯದ ಜನಸಂಖ್ಯೆ ಪ್ರಮಾಣ ಶೇಕಡಾ 9ರಷ್ಟಿದೆ. ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದಲ್ಲಿ ಸಿದ್ದರಾಮಯ್ಯ ಪ್ರಶ್ನಾತೀತ ನಾಯಕರು. ಈ ಸಮುದಾಯಗಳ ಮೇಲೆ ಸಿದ್ದರಾಮಯ್ಯ ಹಿಡಿತ ಹೊಂದಿದ್ದಾರೆ. ಇದು ಈ ಬಾರಿಯ ಚುನಾವಣೆಯಲ್ಲೂ ಪ್ರತಿಫಲಿಸಿದೆ.

ಸಮಾಜವಾದಿ ಸಿದ್ದಾಂತ

ಸಿದ್ದರಾಮಯ್ಯ ಅವರದ್ದು ಸಮಾಜವಾದಿ ಸಿದ್ದಾಂತ. ರಾಮಮನೋಹರ್ ಲೋಹಿಯಾ ಅವರ ಪ್ರಭಾವಳಿ ಸಿದ್ದರಾಮಯ್ಯ ಮೇಲಿದೆ.

ADVERTISEMENT

1978ರಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಸಿದ್ದರಾಮಯ್ಯಗೆ ರೈತ ನಾಯಕ ಎಂಡಿ ನಂಜುಂಡಸ್ವಾಮಿ ಪರಿಚಯ ಆಗುತ್ತಾರೆ. ಅವರ ಒತ್ತಾಸೆಯಿಂದಲೇ ಸಿದ್ದರಾಮಯ್ಯ ರಾಜಕೀಯ ಪ್ರವೇಶ ಮಾಡುತ್ತಾರೆ.

1983ರಲ್ಲಿ ಮೊದಲ ಬಾರಿಗೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗುತ್ತಾರೆ. ಈ ಗೆಲುವಿನೊಂದಿಗೆ ಹಳೆ ಮೈಸೂರು ಭಾಗದಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಗುರುತಿಸಿಕೊಂಡರು.

ADVERTISEMENT

ನಂತರ ಜನತಾ ಪಾರ್ಟಿ ಸೇರಿದರು. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಕೆಲಸ ಮಾಡಿದರು.

1985ರ ಮಧ್ಯಂತರ ಚುನಾವಣೆಯಲ್ಲಿ ಜನತಾಪಕ್ಷ 139 ಸೀಟ್​ ಗೆದ್ದು ಅಧಿಕಾರಕ್ಕೆ ಏರಿತು. ಚಾಮುಂಡೇಶ್ವರಿ ಕ್ಷೇತ್ರದಿಂದ ಎರಡನೇ ಬಾರಿಗೆ ಗೆದ್ದ ಸಿದ್ದರಾಮಯ್ಯ, ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಪಶುಸಂಗೋಪನೆ ಸಚಿವರಾದರು.

1994ರಲ್ಲಿ ಹೆಚ್​ಡಿ ದೇವೇಗೌಡ ನಾಯಕತ್ವದಲ್ಲಿ  ಜನತಾ ಪಕ್ಷ ಸರ್ಕಾರ ರಚಿಸಿತು. ಅಂದು ಆರ್ಥಿಕ ಮಂತ್ರಿಯಾಗಿದ್ದು ಸಿದ್ದರಾಮಯ್ಯ.

1996ರಲ್ಲಿ ಜೆಹೆಚ್ ಪಟೇಲ್ ಮುಖ್ಯಮಂತ್ರಿಯಾದಾಗ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಪ್ರಮೋಷನ್ ಪಡೆದರು.

ಕಾಂಗ್ರೆಸ್​​ಗೆ ಸೇರ್ಪಡೆ.. ಮುಖ್ಯಮಂತ್ರಿ ಪದವಿ..

ದೇವೇಗೌಡರ ನಾಯಕತ್ವದಲ್ಲಿ ಒಂದು ವರ್ಗ, ಜನತಾ ಪಕ್ಷದಿಂದ ಬೇರ್ಪಟ್ಟು ಜೆಡಿಎಸ್​ ಪಕ್ಷ ಉಗಮಕ್ಕೆ ಕಾರಣವಾಗುತ್ತದೆ. ಅಮದು ಸಿದ್ದರಾಮಯ್ಯ ಕೂಡ ದೇವೇಗೌಡರನ್ನು ಅನುಸರಿಸುತ್ತಾರೆ.

2004ರಲ್ಲಿ ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರ ರಚಿಸಿದಾಗ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗುತ್ತಾರೆ.

ಕಾಲ ನಂತರದಲ್ಲಿ ದೇವೇಗೌಡರು ಮತ್ತು ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯಗಳು ಉಂಟಾದವು. ಕುಮಾರಸ್ವಾಮಿಯವರ ರಾಜಕೀಯ ಏಳಿಗೆಗಾಗಿ ಪಕ್ಷದ ನಂಬರ್ 2 ನಾಯಕರಾಗಿದ್ದ ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ದೇವೇಗೌಡರು ಪ್ರಯತ್ನಿಸಿದರು ಎಂಬ ಆರೋಪವಿದೆ.

ಈ ಭಿನ್ನಾಭಿಪ್ರಾಯಗಳು ತಾರಕಕ್ಕೆ ಏರಿ 2005ರಲ್ಲಿ ಜೆಡಿಎಸ್​ನಿಂದ ಹೊರಹಾಕಲ್ಪಟ್ಟ ಸಿದ್ದರಾಮಯ್ಯ ಕಾಂಗ್ರೆಸ್ ಸೇರುತ್ತಾರೆ. 2006ರ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದು ಬೀಗುತ್ತಾರೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನ ತೀರಕ್ಕೆ ಮುನ್ನಡೆಸಿದ ಸಿದ್ದರಾಮಯ್ಯ ಮುಖ್ಯಮಂತ್ರಿ ಕೂಡ ಆಗುತ್ತಾರೆ. ಸರಿಯಾಗಿ ಹತ್ತು ವರ್ಷಗಳ ನಂತರ ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಆಗುವ ಸುಯೋಗ ಕೂಡಿಬಂದಿದೆ.

ನಾಸ್ತಿಕನೆಂಬ ಮುದ್ರೆ..

ಸಿದ್ದರಾಮಯ್ಯ ನಾಸ್ತಿಕ.. ದೇವಾಲಯಗಳಿಗೆ ಹೋಗಲ್ಲ ಎಂಬ ಮಾತಿತ್ತು. ಅವರ ವೇಷಭೂಷಣ ನಡೆ ನುಡಿ ಕೂಡ ಹಾಗೆಯೇ ಇರುತ್ತವೆ. ಅವರ ಆಹಾರ್ಯದಲ್ಲಿ ಧರ್ಮಕ್ಕೆ ಸಂಬಂಧಿಸಿದ ಯಾವುದೇ ಕುರುಹುಗಳು ಕಾಣುವುದಿಲ್ಲ. ಯಾವಾಗಲೂ ಶ್ವೇತವರ್ಣದ ಪಂಚೆ, ಜುಬ್ಬಾ, ಬಿಳಿ ಶಲ್ಯದಲ್ಲಿಯೇ ಸಿದ್ದರಾಮಯ್ಯ ರಾರಾಜಿಸುತ್ತಾರೆ.

ಎಲ್ಲರು ನನ್ನನ್ನು ನಾಸ್ತಿಕ ಎಂದು ಭಾವಿಸುತ್ತಾರೆ. ಆದರೆ, ಅದು ನಿಜವಲ್ಲ.ನನಗೂ ದೈವ ಭಕ್ತಿ ಇದೆ. ನನ್ನಲ್ಲೂ ದೈವ ಚಿಂತನೆ ಇದೆ. ಆದರೆ, ನಾನು ಮೂಢನಂಬಿಕೆಗಳಿಗೆ ದೂರ. ಯಾವುದನ್ನೇ ಆಗಲಿ ಸೈನ್ಸ್ ಆಯಾಮದಲ್ಲೇ ಪರಿಶೀಲಿಸುತ್ತೇನೆ ಎಂದು ಹಿಂದೊಮ್ಮೆ ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: #JanataParty#SiddaramaiahCMSiddaramaiahLifeStorySocialistSiddaramaiah
ADVERTISEMENT
Previous Post

ಇ-ಸ್ಕೂಟರ್​​ಗಳ ಖರೀದಿಗೆ ಸಬ್ಸಿಡಿ ಕಡಿತ ಸಾಧ್ಯತೆ

Next Post

ಬಿಜೆಪಿ ಸರ್ಕಾರದ ಮೇಲೆ ನಮಗೆ ನಂಬಿಕೆಯೇ ಇಲ್ಲ – ಬಿಜೆಪಿ ಶಾಸಕರ ನಿಯೋಗದಿಂದಲೇ ಅಭಿಪ್ರಾಯ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಬಿಜೆಪಿ ಸರ್ಕಾರದ ಮೇಲೆ ನಮಗೆ ನಂಬಿಕೆಯೇ ಇಲ್ಲ – ಬಿಜೆಪಿ ಶಾಸಕರ ನಿಯೋಗದಿಂದಲೇ ಅಭಿಪ್ರಾಯ

ಬಿಜೆಪಿ ಸರ್ಕಾರದ ಮೇಲೆ ನಮಗೆ ನಂಬಿಕೆಯೇ ಇಲ್ಲ - ಬಿಜೆಪಿ ಶಾಸಕರ ನಿಯೋಗದಿಂದಲೇ ಅಭಿಪ್ರಾಯ

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!