ಮತಾಂತರ ನಿಷೇಧ ಕಾನೂನು ವಾಪಸ್​ – ಸಿದ್ದರಾಮಯ್ಯ ಸರ್ಕಾರ ತೀರ್ಮಾನ

ಈ ಹಿಂದೆ ಬಿಜೆಪಿ ಸರ್ಕಾರ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನೂ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ತೀರ್ಮಾನಿಸಿದೆ.

ಮತಾಂತರ ನಿಷೇಧ ಕಾಯ್ದೆ ಎಂದೇ ಕರೆಯಲಾಗುವ ಕರ್ನಾಟಕ ಧಾರ್ಮಿಕ ಹಕ್ಕುಗಳ ರಕ್ಷಣಾ ಕಾಯ್ದೆಯನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ ಕೆ ಪಾಟೀಲ್​ ಅವರು ಹೇಳಿದ್ದಾರೆ.