ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬಾರದು ಮತ್ತು ತಮಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸಾರ್ವಜನಿಕ ಭಿತ್ತಿಪತ್ರಗಳನ್ನು, ಕಟೌಟ್ಗಳನ್ನು ಹಾಕಿಸಿದ್ದಾರೆ.
ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮುರಿದ ಮನಸ್ಸುಗಳ ಬೆಸುಗೆಯಾಗಲಿ, ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ
ಎಂಬ ಬರಹ ಇರುವ ಪೋಸ್ಟರ್ಗಳನ್ನು ಮಾಜಿ ಸಚಿವ ಈಶ್ವರಪ್ಪ ಅವರನ್ನೇ ಗುರಿಯಾಗಿಸಿ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ನಗರದಲ್ಲಿ ಹಾಕಿಸಿದ್ದಾರೆ.
ಹಿಂದೂ ಬಾಂಧವರಿಗೆ ಯುಗಾದಿ ಹಬ್ಬದ ಶುಭಾಶಯಗಳು, ಮುಸಲ್ಮಾನ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು. ಎಲ್ಲರಿಗೂ ಹಬ್ಬದ ಶುಭಾಶಯಗಳು. ಈ ಬಾರಿ ಸ್ನೇಹಪ್ರಿಯ ಆಯನೂರು ಮಂಜುನಾಥ್