ADVERTISEMENT
ಮೂಲಗಳ ಮಾಹಿತಿ ಪ್ರಕಾರ ಬಳ್ಳಾರಿ ನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಂಡಿದ್ದಾರೆ.
ಮಾಹಿತಿ ಪ್ರಕಾರ ಬಳ್ಳಾರಿ ನಗರದಿಂದ ಅಲ್ಲಂ ಪ್ರಶಾಂತ್ ಅವರಿಗೆ ಕಾಂಗ್ರೆಸ್ ನೀಡುವ ತೀರ್ಮಾನ ತೆಗೆದುಕೊಂಡಿದೆ.
ಅಲ್ಲಂ ಪ್ರಶಾಂತ್ ಅವರು ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಅವರ ಪುತ್ರ.
ಈ ಕ್ಷೇತ್ರದಿಂದ ಕಾಂಗ್ರೆಸ್ನ ಹಿರಿಯ ನಾಯಕ ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ಭರತ್ ರೆಡ್ಡಿ ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷೆ ಇತ್ತು.
ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಲಿದೆ. ಮಾರ್ಚ್ 18ರಂದು ಶನಿವಾರ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಿದೆ.
ADVERTISEMENT