ADVERTISEMENT
ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡುಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಘಾತ ನೀಡಿದೆ.
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದಿರುವ 118 ಕೋಟಿ ರೂಪಾಯಿ ಮೊತ್ತದ ನಕಲಿ ಕಾಮಗಾರಿಗಳ ಬಿಲ್ ಮಂಜೂರಾತಿ ಸಂಬಂಧ ಎಂಟು ಇಂಜಿನಿಯರ್ಗಳನ್ನು ಅಮಾನತು ಮಾಡಲಾಗಿದೆ.
ಲೋಕಾಯುಕ್ತ ಶಿಫಾರಸ್ಸು ಒಪ್ಪಿಕೊಂಡಿರುವ ನಗರಾಭಿವೃದ್ಧಿ ಇಲಾಖೆ ಹಗರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸುವಂತೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರಿಗೆ ಸೂಚಿಸಿದೆ.
ಅಮಾನತುಗೊಂಡಿರುವ ಬಿಬಿಎಂಪಿ ಇಂಜಿನಿಯರ್ಗಳು:
ದೊಡ್ಡಯ್ಯ ಮುಖ್ಯ ಅಭಿಯಂತರರಯ ಟಿವಿಸಿಸಿ
ಸತೀಶ್ ಸಹಾಯಕ ಕಾರ್ಯಪಾಲಕ ಅಭಿಯಂತರರು
ಬಸವರಾಜ್ ಪ್ರಭಾರ ಕಾರ್ಯಪಾಲಕ ಅಭಿಯಂತರರು
ಸಿದ್ದರಾಮಯ್ಯ ಸಹಾಯಕ ಅಭಿಯಂತರರು
ಉಮೇಶ್ ಸಹಾಯುಕ ಅಭಿಯಂತರರು
ಶ್ರೀನಿವಾಸ್ ಕಾರ್ಯಪಾಲಕ ಅಭಿಯಂತರರು
ವೆಂಕಟಲಕ್ಷ್ಮೀ, ಸಹಾಯಕ ಕಾರ್ಯಪಾಲಕ ಅಭಿಯಂತರರು
ಏನಿದು ಹಗರಣ:
ಕ್ಷೇತ್ರದಲ್ಲಿ ವಿವಿಧ ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲು ಕೆಆರ್ಐಡಿಎಲ್ಗೆ ಆದೇಶಿಸಲಾಗಿತ್ತು. 250 ಕೋಟಿ ರೂಪಾಯಿ ಕಾಮಗಾರಿಯಲ್ಲಿ ಭಾರೀ ಅಕ್ರಮ ನಡೆದಿದೆ, ಕಾಮಗಾರಿ ಕೈಗೊಳ್ಳದೇ ನಕಲಿ ಬಿಲ್ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ತನಿಖೆಯಲ್ಲಿ ದೃಢ:
118 ಕೋಟಿ ರೂಪಾಯಿ ಮೊತ್ತದ ನಕಲಿ ಬಿಲ್ ಮಂಜೂರು ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಆ ಎಂಟು ಎಂಜಿನಿಯರ್ಗಳ ಅಮಾನತಿಗೆ ಆದೇಶಿಸಿದೆ.
ADVERTISEMENT