No Result
View All Result
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮಾಜಿ ಸಚಿವ ಗಂಗಾಧರ್ ಗೌಡ, ಅವರ ಪುತ್ರ ರಂಜನ್ ಗೌಡ ಅವರಿಗೆ ಕೆಪಿಸಿಸಿ ನೋಟಿಸ್ ನೀಡಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ರಕ್ಷಿತ್ ಶಿವರಾಂ ಅವರು ಸೋಲು ಅನುಭವಿಸಿದ್ದರು.
ರಂಜನ್ ಗೌಡ ಅವರು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಗಂಗಾಧರ ಗೌಡ ಅವರೂ ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಮತ್ತೋರ್ವ ಕಾಂಗ್ರೆಸ್ ಮುಖಂಡ ಶೈಲೇಶ್ ಕುಮಾರ್ ಅವರಿಗೂ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ.
ಕಾಂಗ್ರೆಸ್ ಪಕ್ಷದ ಪರ ಪ್ರಚಾರದಿಂದ ದೂರ ಉಳಿದಿದ್ದ ಈ ಮೂವರು ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಪರವಾಗಿ ಪರೋಕ್ಷವಾಗಿ ಕೆಲಸ ಮಾಡಿ ಬಿಜೆಪಿ ಗೆಲ್ಲಲು ಸಹಾಯ ಮಾಡಿದ್ದರು ಎಂಬ ಆರೋಪದಡಿ ನೋಟಿಸ್ ಜಾರಿಯಾಗಿದೆ.
ಶಿಸ್ತು ಸಮಿತಿ ಅಧ್ಯಕ್ಷ ಮಾಜಿ ರಾಜ್ಯಸಭಾ ಸಂಸದ ಕೆ ರೆಹಮಾನ್ ಖಾನ್ ಅವರು ನೋಟಿಸ್ ನೀಡಿದ್ದು, ಜುಲೈ 8ರಂದು ಕೆಪಿಸಿಸಿ ಕಚೇರಿಗೆ ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ವಿಧಾನಸಭಾ ಸೋಲಿನ ಸಂಬಂಧ ಕಾಂಗ್ರೆಸ್ ಆಂತರಿಕ ವಿಚಾರಣೆ ನಡೆಸುತ್ತಿದೆ.
No Result
View All Result
error: Content is protected !!