ADVERTISEMENT
ಬಜರಂಗದಳವರು ಕೊಟ್ಟ ದೂರಿನ ಆಧಾರದಲ್ಲಿ ಬೆಂಗಳೂರಿನ ಪೊಲೀಸರು ನಟ ಚೇತನ್ ಅವರನ್ನು ಬಂಧಿಸಿದ್ದಾರೆ.
ಬಜರಂಗದಳದ ಶಿವಕುಮಾರ್ ಎಂಬ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದರು. ಆ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ನಟ ಚೇತನ್ ಅವರನ್ನು ಬಂಧಿಸಿದ್ದಾರೆ.
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ನಟ ಚೇತನ್ ಟ್ವೀಟಿಸಿದ್ದರು.
ಈ ಹಿಂದೆಯೂ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ತೀರ್ಪಿನ ವಿರುದ್ಧ ಟ್ವೀಟ್ ಮಾಡಿದ್ದರ ಸಂಬಂಧ ನಟ ಚೇತನ್ ಬಂಧನವಾಗಿತ್ತು.
ADVERTISEMENT