ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿ ತಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಪ್ರಯತ್ನ ನಡೆಸಿರುವ ಬಸ್ ಯಡಿಯೂರಪ್ಪ, ಈಶ್ವರಪ್ಪ ಅವರಂತಹ ನಾಯಕರಿಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ BL ಸಂತೋಷ್ ಅಸಂತೋಷದ ಸುದ್ದಿಯನ್ನು ರವಾನೆ ಮಾಡಿದ್ದಾರೆ.
ರಾಜ್ಯದಲ್ಲಿಯೂ ಇನ್ನು ಮುಂದೆ ಕುಟುಂಬ ರಾಜಕಾರಣಕ್ಕೆ ಅವಕಾಶವಿರುವುದಿಲ್ಲ. ಉತ್ತರ ಪ್ರದೇಶ ಸೇರಿ ಪಂಚ ರಾಜ್ಯ ಚುನಾವಣೆಯಲ್ಲಿ ಅನುಸರಿಸಿದ ವಿಧಾನವನ್ನೇ ಚಾಚು ತಪ್ಪದೇ ಪಾಲಿಸಲಾಗುತ್ತದೆ ಎಂಬ ಮಾತನ್ನು BL ಸಂತೋಷ್, ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಒತ್ತಿ ಹೇಳಿದ್ದಾರೆ.
ಈ ಮೂಲಕ ಮುಂದಿನ ಚುನಾವಣೆಯಲ್ಲಿ ಹಿರಿಯ ನಾಯಕರ ಮಕ್ಕಳು, ಮೊಮ್ಮಕ್ಕಳು, ಸಂಬಂಧಿಗಳಿಗೆ ಟಿಕೆಟ್ ಸಿಗಲ್ಲ ಎಂಬ ಮಾತನ್ನು ಸಂತೋಷ್ ಪರೋಕ್ಷವಾಗಿ ಹೇಳಿದ್ದಾರೆ.
ಯಡಿಯೂರಪ್ಪ ಪುತ್ರ ವಿಜಯೇಂದ್ರರನ್ನು ಶಿಕಾರಿಪುರದಿಂದಲೂ, ಈಶ್ವರಪ್ಪ ಪುತ್ರ ಕಾಂತೇಶ್ ರನ್ನು ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಟಿಕೆಟ್ ಕೊಡಿಸಲು ಪ್ರಯತವನ್ನು ಮಾಡಿದ್ದರು.. ಆದರೆ, ಸಂತೋಷ್ ಮಾತು ಇದಕ್ಕೆಲ್ಲ ನೀರೆಚಿದೆ.