ಅಕ್ಷಯ್ ಕುಮಾರ್ ಯು, ಮುಖ್ಯ ಸಂಪಾದಕರು, ಪ್ರತಿಕ್ಷಣ
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಇವತ್ತಿಗೆ ಒಂದು ತಿಂಗಳು. ಒಂದು ತಿಂಗಳಾದರೂ ಇನ್ನೂ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ.
ಮೇ 13ರಂದು ಪ್ರಕಟವಾದ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸೀಟು ಮತ್ತು ಬಿಜೆಪಿ ಕೇವಲ 65 ಸೀಟುಗಳನ್ನು ಗೆದ್ದುಕೊಂಡಿತ್ತು.
ಒಂದೂ ತಿಂಗಳಾದರೂ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿರುವ ಬಿಜೆಪಿಯನ್ನು ಮುನ್ನಡೆಸುವ ನಾಯಕ ಯಾರೂ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಚಿವ, ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಹೆಸರು ಚರ್ಚೆಯಲ್ಲಿದೆ.
ಮೂರೇ ದಿನದಲ್ಲಿ ಎಂದಿದ್ದ ಸಚಿವ ಜೋಶಿ:
ಈಗಾಗಲೇ ವಿರೋಧ ಪಕ್ಷದ ನಾಯಕನನ್ನು ನೇಮಿಸಿರಬೇಕು, ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಕೇಂದ್ರೀಕರಿಸಿದ್ದಾರೆ. ಮೂರು ದಿನಗಳಲ್ಲಿ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲಾಗುವುದು