ಈ ಆರು ಮಂದಿ ಬಿಜೆಪಿ ಶಾಸಕರಿಗೆ ಈ ಬಾರಿ ಟಿಕೆಟ್​ ಇಲ್ಲ..?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಆರು ಮಂದಿ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್​ ನಿರಾಕರಿಸಬಹುದು ಎಂದು ಮೂಲಗಳು ತಿಳಿಸಿವೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎಂಪಿ ಕುಮಾರಸ್ವಾಮಿಗೆ ಅವರಿಗೆ ಈ ಬಾರಿ ಟಿಕೆಟ್​ ನಿರಾಕರಿಸಬಹುದು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್​ ಎ ರವೀಂದ್ರನಾಥ್​ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್​ ನೀಡುವ ಸಾಧ್ಯತೆ ತುಂಬಾ ಕಡಿಮೆ ಇದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಡೇಸಗೂರು ಅವರಿಗೆ ಈ ಬಾರಿಗೆ ಬಿಜೆಪಿ ಟಿಕೆಟ್​ ನಿರಾಕರಿಸಬಹುದು. ಪಿಎಸ್​ಐ ನೇಮಕಾತಿ ಹಗರಣದಲ್ಲಿ ಆಡಿಯೋ ವೈರಲ್​ ಒಳಗೊಂಡಂತೆ ಹಲವು ವಿವಾದಗಳಲ್ಲಿ ಡಡೇಸಗೂರು ಹೆಸರು ತಳುಕು ಹಾಕಿಕೊಂಡಿತ್ತು.

ವಯಸ್ಸಿನ ಕಾರಣದಿಂದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮುಧೋಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್​ ಕೈ ತಪ್ಪುವ ನಿರೀಕ್ಷೆ ಇದೆ. ಕಾರಜೋಳ ಅವರಿಗೆ 72 ವರ್ಷ ವಯಸ್ಸು.

ಹಾವೇರಿ ಶಾಸಕ ನೆಹರು ಒಲೇಕಾರ್​ ಅವರಿಗೂ ಬಿಜೆಪಿ ಟಿಕೆಟ್​ ನೀಡುವ ಸಾಧ್ಯತೆ ತುಂಬಾ ಕಡಿಮೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಜಿಲ್ಲೆಯ ಈ ಪ್ರಮುಖ ಬಿಜೆಪಿ ಶಾಸಕ ಕಾಂಗ್ರೆಸ್​ ಕಡೆ ಮುಖ ಮಾಡಬಹುದು ಎನ್ನಲಾಗ್ತಿದೆ.

ಅಚ್ಚರಿಯ ರೀತಿಯಲ್ಲಿ ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ರವಿಸುಬ್ರಹ್ಮಣ್ಯ ಅವರಿಗೆ ಟಿಕೆಟ್​ ನಿರಾಕರಿಸಬಹುದು.

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚನ್ನಗಿರಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಅವರಿಗೆ ಬಿಜೆಪಿ ಟಿಕೆಟ್​ ನಿರಾಕರಿಸುವುದು ಖಚಿತ.

LEAVE A REPLY

Please enter your comment!
Please enter your name here