BREAKING: BJP ಶಾಸಕ ಹರೀಶ್​ ಪೂಂಜಾ ವಿರುದ್ಧ FIR ದಾಖಲು

ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಐಪಿಸಿ ಕಲಂ 153, 153ಎ ಮತ್ತು 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದರು ಎಂದು ಪೂಂಜಾ ಆಧಾರರಹಿತ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. 

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಕೆ ನಮಿತಾ ಪೂಜಾರಿ ಅವರು ಕೊಟ್ಟ ದೂರಿನಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್​ ಕೇಳಿದ್ದೀರಿ. ಬಜರಂಗದಳ ನಿಷೇಧ ಮಾಡ್ತೇವೆ ಎಂದು ಹೇಳಿದ ಕಾಂಗ್ರೆಸ್​ ಪರ ಮತ ಕೇಳಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳ್ತಿದ್ದಾರೆ 

ಎಂದು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಚುನಾವಣಾ ಗೆಲುವಿನ ಬಳಿಕ ಶಾಸಕ ಹರೀಶ್​ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದರು.