ಉಡುಪಿ ಜಿಲ್ಲೆಯ ಮಹಾಲಕ್ಷ್ಮೀ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಮತ್ತು ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೊಸೈಟಿ ಅಧ್ಯಕ್ಷ ಯಶಪಾಲ್ ಸುವರ್ಣ, ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ವ್ಯವಸ್ಥಾಪಕ ನಿರ್ದೇಶಕ ಶೀನ್ ಕೆ ಗಂಗೊಳ್ಳಿ ಮತ್ತು ಸೊಸೈಟಿಯಿಂದ ಸಾಲ ಪಡೆದಿದ್ದ ರಿಯಾಜ್ ಎಂಬವರ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಮತ್ತು ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸೊಸೈಟಿಯ ಮಲ್ಪೆ ಶಾಖೆಯ ಮ್ಯಾನೇಜರ್ ಆಗಿದ್ದ ದಲಿತ ಸಮುದಾಯಕ್ಕೆ ಸೇರಿದ್ದ ಸುಬ್ಬಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಅವರ ಸಹೋದರ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದರು.
ಮಾರ್ಚ್ 8ರಂದು ರಾಜ್ಮಹಲ್ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುಬ್ಬಣ್ಣ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಯಶಪಾಲ್ ಸುವರ್ಣ ಒಳಗೊಂಡಂತೆ ನಾಲ್ವರ ವಿರುದ್ಧ ತಮ್ಮ ಸಾವಿಗೆ ಇವರೇ ಕಾರಣ ಎಂದು ದೂರಿದ್ದರು.
ಈ ನಡುವೆ ಯಶಪಾಲ್ ಸುವರ್ಣ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಕಾಂಗ್ರೆಸ್ ಪ್ರಶ್ನೆ ಕೇಳಿದೆ.
ಉಡುಪಿಯ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕಿನ ಮ್ಯಾನೇಜರ್ ಡೆತ್ ನೋಟ್ನಲ್ಲಿ ಯಶಪಾಲ್ ಸುವರ್ಣನ ವಿರುದ್ದ ನೇರವಾಗಿ ಕಿರುಕುಳದ ಆರೋಪ ಮಾಡಿದ್ದರೂ ಆತನನ್ನು ಬಂಧಿಸಿಲ್ಲವೇಕೆ? ಕಾನೂನನ್ನು ಕಡಲೇಬೀಜ ಮಾಡಿಕೊಂಡ @JnanendraAraga ಅವರೇ, ಕೊಲೆಗಡುಕರ ರಕ್ಷಣೆಯೇ ಗೃಹಸಚಿವರಾಗಿ ನಿಮ್ಮ ಹೊಣೆಯೇ? ಬಿಜೆಪಿಗರ ವಿರುದ್ಧ ಕಾನೂನು ಕೈ ಕಟ್ಟಿ ನಿಲ್ಲುವುದೇಕೆ?
#40PercentSarkara ದ ಕಮಿಷನ್ ಕಿರುಕುಳಕ್ಕೆ ಗುತ್ತಿಗೆದಾರರ ಆತ್ಮಹತ್ಯೆಯ ನಂತರ ಸಹಕಾರಿ ಬ್ಯಾಂಕ್ ಮ್ಯಾನೇಜರ್ ಸರದಿ. ಉಡುಪಿಯ ಮಹಾಲಕ್ಷ್ಮಿ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷನಾಗಿರುವ ಯಶ್ಪಾಲ್ ಸುವರ್ಣನನ್ನು ಹೆಸರಿಸಿ ಅದೇ ಬ್ಯಾಂಕಿನ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡ ಸಂಗತಿ ಬೆಳಕಿಗೆ ಬಂದಿದೆ, ಸರ್ಕಾರ ಮಾತ್ರ ರಕ್ಷಣೆಗೆ ನಿಂತಿದೆ.