ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಬಳಿಕ ಬೆಳಗಾವಿ ರಾಮದುರ್ಗದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ಕೊಲೆ ನಡೆದ ನಾಲ್ಕೇ ಗಂಟೆಗಳಲ್ಲಿ ಬಂಧಿಸಿದ್ದಾರೆ.
ವಿದ್ಯಾನಗರ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಆರೋಪಿಗಳಾದ ಮಹಾಂತೇಶ್ ಶಿರೂರ ಮತ್ತು ಮಂಜುನಾಥ ದುಮ್ಮವಾಡನನ್ನು ಬಂಧಿಸಿದ್ದಾರೆ. ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದಾರೆ ಎಂಬ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
ರಸ್ತೆ ಮಧ್ಯೆ ಜೆಸಿಬಿಯಿಂದ ಆರೋಪಿಗಳಿದ್ದ ಕಾರನ್ನು ಅಡ್ಡಗಟ್ಟಿದ ಪೊಲೀಸರು ಆರೋಪಿಗಳು ಪ್ರತಿದಾಳಿ ನಡೆಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಗನ್ ಪಾಯಿಂಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಬ್ಬರು ಚಂದ್ರಶೇಖರ ಗುರೂಜಿ ಅವರಿಗೆ ಆಪ್ತರಾಗಿದ್ದು ಸರಳವಾಸ್ತು ಸಂಸ್ಥೆಯಲ್ಲಿ ಗುರೂಜಿ ಜೊತೆ ಕೆಲಸ ಮಾಡಿದ್ದರು ಎಂದು ತಿಳಿದುಬಂದಿದೆ.
ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆ ಮಾತಾಗಿದ್ದ ಚಂದ್ರಶೇಖರ್ ಗುರೂಜಿಯನ್ನು ಹುಬ್ಬಳ್ಳಿಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.