ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನಲೆ ಡಿಸೆಂಬರ್ ಕೊನೆ ವಾರದಲ್ಲಿಯೇ ಕಾಫಿನಾಡಿಗೆ ಹೊರಡಲು ಸಿದ್ದರಾಗಿದ್ದಾರೆ. ಈ ಯೋಜನೆಯನ್ನು ಬದಲಾಯಿಸಿಕೊಳ್ಳುವುದು ಒಳಿತು. ಕಾರಣ ಕಾಫಿನಾಡಿನಲ್ಲಿ ದತ್ತಜಯಂತಿ ಹಿನ್ನೆಲೆ ಆರು ದಿನಗಳ ಕಾಲ ಮುಳ್ಳಯ್ಯನಗಿರಿ ಭಾಗದ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಡಿ. 22ರಿಂದ 27ರವರೆಗೆ
ಆರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲೆಯ ಯಾವುದೇ ಪ್ರವಾಸಿತಾಣಕ್ಕೆ ಅವಕಾಶ ಇಲ್ಲ.
ಹೌದು ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಂಡಳಿ ನಿಷೇಧ ಹೇರಿ ಆದೇಶ ಹೊರಡಿಸಿದ್ದು, 6 ದಿನ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ದತ್ತಪೀಠದಲ್ಲಿ ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿದ್ದು, ಡಿ.26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಟೂರಿಸ್ಟ್ ವಾಹನಗಳು, ಮಾಲಾಧಾರಿಗಳ ವಾಹನಗಳಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.