ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ನಕಲಿ ಪತ್ರದ ತನಿಖೆ CIDಗೆ ಹಸ್ತಾಂತರ

ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧದ ನಕಲಿ ಪತ್ರದ ತನಿಖೆಯನ್ನು ಸಿಎಂ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.

ಗೃಹ ಸಚಿವ ಡಾ ಜಿ ಪರಮೇಶ್ವರ್​ ಅವರ ಜೊತೆಗಿನ ಚರ್ಚೆ ಬಳಿಕ ಸಿಐಡಿ ತನಿಖೆಗೆ ಒಪ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಮಂಡ್ಯದ ಜಂಟಿ ನಿರ್ದೇಶಕರ ಹೆಸರಲ್ಲಿ ಸಚಿವರ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ದೂರು ನೀಡಲಾಗಿತ್ತು.

ಆ ಪತ್ರದ ಬಗ್ಗೆ ಗಮನಹರಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದರು.

ಪತ್ರ ನಕಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಹೇಳಿದ್ದು, ಪತ್ರದ ಸೃಷ್ಟಿಕರ್ತರು ಬಿಜೆಪಿಯೋ ಅಥವಾ ಅವರ ಬ್ರದರೋ ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕುಟುಕಿದ್ದರು.

LEAVE A REPLY

Please enter your comment!
Please enter your name here