ADVERTISEMENT
ಮುಂದಿನ ತಿಂಗಳಲ್ಲೇ ವಿಧಾನಸಭಾ ಚುನಾವಣೆ ಘೋಷಣೆ ಆಗಲಿರುವ ಹಿನ್ನೆಲೆಯಲ್ಲಿ ತಮ್ಮ ಕೊನೆಯ ಬಜೆಟ್ನಲ್ಲಿ ಬಿಜೆಪಿ ಸರ್ಕಾರ ಮಠಗಳು ಮತ್ತು ದೇವಸ್ಥಾನಗಳಿಗೆ ಅನುದಾನ ಘೋಷಿಸಿದೆ.
ಕಳೆದ ಬಜೆಟ್ನಲ್ಲಿ ಮಠಗಳು ಮತ್ತು ದೇವಸ್ಥಾನಗಳಿಗೆ 425 ಕೋಟಿ ರೂಪಾಯಿ ಅನುದಾನ ನೀಡಿತ್ತು.
ಆದರೆ ಮುಂದಿನ 2 ವರ್ಷಗಳಲ್ಲಿ ಮಠ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 1 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಈ ವರ್ಷ ಮತ್ತು ಮುಂದಿನ ವರ್ಷ ಸರ್ಕಾರ ಕೊಡುವ ಅನುದಾನ ಎರಡನ್ನೂ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಮುಜರಾಯಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 49 ಸಾವಿರ ರೂಪಾಯಿಗಳಿಂದ 60 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ.
ADVERTISEMENT