ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ ಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಇಬ್ರಾಹಿಂ ಹೇಳಿದ್ದಾರೆ.
ನಮ್ಮದು ಪ್ರಾದೇಶಿಕ ಪಕ್ಷ, ನಮ್ಮ ಬಳಿ ಹಣ ಇಲ್ಲ. ಆದರೂ 60 ಲಕ್ಷ ಮತ ಪಡೆದಿದ್ದೇವೆ. ಕಾಂಗ್ರೆಸ್ನವರಿಗೆ ಮೂರು ತಿಂಗಳ ಸಮಯ ಕೊಡ್ತೀವಿ, ಅಷ್ಟರೊಳಗೆ ಕಾಂಗ್ರೆಸ್ನವರು ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಿ