ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಭ್ರಷ್ಟಾಚಾರವನ್ನು ಮಟ್ಟ ಹಾಕುವ ಸಂಬಂಧ ಸಮರ ಸಾರಿರುವ ಸಿಎಂ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಬಿಡುಗಡೆ ಮಾಡಿದ್ದ 3 ಸಾವಿರ ಕೋಟಿ ರೂಪಾಯಿ ಅನುದಾನದಲ್ಲಿದ್ದ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ಈ ಸಂಬಂಧ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಅವರು ಸೂಚನೆ ನೀಡಿದ್ದಾರೆ.
ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ವಿಷಯದ ಕುರಿತ ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗಾಗಿ ತಪ್ಪಿತಸ್ಥರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ
ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ 3 ಸಾವಿರ ಕೋಟಿ ರೂಪಾಯಿ ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಎರಡು ಮೂರು ವರ್ಷಗಳಿಂದ ಕೇಳಿಬರುತ್ತಿವೆ. ಆದ್ದರಿಂದ ಈ ಕೂಡಲೇ ನಿರ್ದಾಕ್ಷಿಣ್ಯವಾಗಿ ಇಲಾಖೆ ತನಿಖೆ ನಡೆಸಿ ಎಲ್ಲೆಲ್ಲಿ ನಿಯಮ ಬಾಹಿರ ಅನುದಾನಗಳನ್ನು ವಿನಿಯೋಗಿಸಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ವಿಷಯದ ಬಗ್ಗೆ ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಥರ ವಿವರಗಳೊಂದಿಗೆ ವರದಿ ಸಲ್ಲಿಸಬೇಕು
ಎಂದು ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ತ್ತು ಸಾಂಸ್ಕೃತಿಕ ಸಂಘಕ್ಕೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ 300 ಕೋಟಿಗಳ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಎರಡು ಮೂರು ವರ್ಷಗಳಿಂದ ಕೇಳಿಬರುತ್ತಿವೆ. ಈ ವಿಷಯದ ಕುರಿತು ನಿರ್ದಾಕ್ಷಿಣ್ಯವಾದ ಇಲಾಖೆ ತನಿಖೆ ನಡೆಸಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ವಿಷಯದ ಬಗ್ಗೆ 15 ದಿನಗಳ ಒಳಗಾಗಿ ತಪ್ಪಿತಸ್ಥರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸಬೇಕು
ಎಂದು ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗಾಗಿ ಬಿಡುಗಡೆ ಮಾಡಿ ವೆಚ್ಚ ಮಾಡಲಾಗಿರುವ 3.50 ಕೋಟಿ ರೂಪಾಯಿ ಅನುದಾನವನ್ನು ಕೆಟಿಪಿಪಿ ಕಾಯ್ದೆಯನ್ವರ ಪ್ರಕ್ರಿಯೆಗಳನ್ನು ನಡೆಸದೇ ಹೆಚ್ಚುವರಿಯಾಗಿ 50 ಲಕ್ಷ ರೂಪಾಯಿ ವೆಚ್ಚ ಮಾಡುವಲ್ಲಿ ನಡೆದಿವೆ ಎಂದು ದೂರು ಸಲ್ಲಿಕೆಯಾಗಿದೆ. ಇದನ್ನೂ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ ವರದಿ ಸಲ್ಲಿಸಬೇಕು
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ADVERTISEMENT
ADVERTISEMENT