Congress, BJP Protest: ಏಕಕಾಲಕ್ಕೆ ಎರಡೂ ಪಕ್ಷಗಳಿಂದ ಧರಣಿ

ವಿಧಾನಸಭೆಯ ಕಲಾಪ ಆರಂಭ ಆಗುವುದಕ್ಕೂ ಮೊದಲು ಇವತ್ತು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆಗೆ ಕೂತರೆ, ಅತ್ತ ವಿಧಾನಸೌಧದ ಎದುರಿರುವ ಗಾಂಧಿ ಪ್ರತಿಮೆ ಎದುರು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧದ ಮಾಡಲಾಗಿರುವ ಮಾನನಷ್ಟ ಹೇಳಿಕೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್​ ಹೈಕೋರ್ಟ್​ ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಇವತ್ತು ರಾಷ್ಟ್ರಾದ್ಯಂತ ಮೌನ ಪ್ರತಿಭಟನೆ ಆಯೋಜಿಸಿದೆ.

ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂಬ ಪೋಸ್ಟರ್​ಗಳನ್ನು ಹಿಡಿದು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್​, ಕಾಂಗ್ರೆಸ್​ ಶಾಸಕರು ಮತ್ತು ಕಾಂಗ್ರೆಸ್​ ಶಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದೆ.

ಇತ್ತ ಹಿಂದೂ ಕಾರ್ಯಕರ್ತರ ಹತ್ಯೆ, ಜೈನ ಮುನಿ ಹತ್ಯೆ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ, ಕಾಂಗ್ರೆಸ್​ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಗಾಂಧಿ ಪ್ರತಿಮೆ ಎದುರು ಧರಣಿ ಕೂತಿದ್ದಾರೆ.

LEAVE A REPLY

Please enter your comment!
Please enter your name here