BIG BREAKING: ಈ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳು ಅಂತಿಮ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇವತ್ತು ಕಾಂಗ್ರೆಸ್​ ಚುನಾವಣಾ ಸಮಿತಿ ಸಭೆ ನಡೆಯಲಿದೆ.

ಮೂಲಗಳ ಪ್ರಕಾರ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ರಾಜಾಜಿನಗರ ಕ್ಷೇತ್ರದಿಂದ ಮಾಜಿ ಎಂಎಲ್​ಸಿ ಪುಟ್ಟಣ್ಣ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಲು ತೀರ್ಮಾನಿಸಿದೆ.

ಗುಂಡ್ಲುಪೇಟೆ ಕ್ಷೇತ್ರದಿಂದ ಹೆಚ್​ ಎಂ ಗಣೇಶ್​ಪ್ರಸಾದ್​ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಲು ನಿರ್ಧರಿಸಿದೆ. ಕಳೆದ ಬಾರಿಯೂ ಇವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಿತ್ತು.

ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಮಾಜಿ ಶಾಸಕ ಕೆ ಎಸ್​ ಕಿರಣ್​ಕುಮಾರ್​ ಅವರಿಗೆ ಟಿಕೆಟ್​ ನೀಡಲು ತೀರ್ಮಾನಿಸಿದೆ.

ಕೆಲ ದಿನಗಳ ಹಿಂದೆಯಷ್ಟೇ ಪುಟ್ಟಣ್ಣ ಅವರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರಿದ್ದರು.  

ಚಿಕ್ಕನಾಯಕನಹಳ್ಳಿಯಲ್ಲಿ ಈ ಬಾರಿ ಮತ್ತೆ ಸಚಿವ ಮಾಧುಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್​ ನೀಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಕಿರಣ್​ ಕುಮಾರ್​ ಅವರು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್​ ಸೇರಿದ್ದರು.

LEAVE A REPLY

Please enter your comment!
Please enter your name here