ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಹೊರಡಿಸಿರುವ ಆದೇಶದ ವಿರುದ್ಧ ಇವತ್ತು ಕಾಂಗ್ರೆಸ್ ರಾಷ್ಟ್ರವ್ಯಾಪಿ ಸತ್ಯಾಗ್ರಹ ನಡೆಸುತ್ತಿದೆ.
ನವದೆಹಲಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿ ರಾಜ್ಘಾಟ್ನಲ್ಲಿ ಸಂಕಲ್ಪ ಸತ್ಯಾಗ್ರಹಕ್ಕೆ ತೀರ್ಮಾನಿಸಿದೆ.
ಆದರೆ ದೆಹಲಿ ಪೊಲೀಸರು ಕಾಂಗ್ರೆಸ್ ನಿರ್ಧರಿಸಿರುವ ಸತ್ಯಾಗ್ರಹಕ್ಕೆ ಅನುಮತಿ ನೀಡಿಲ್ಲ.
ಸತ್ಯಾಗ್ರಹದಿಂದಾಗಿ ರಾಜ್ಘಾಟ್ ಸುತ್ತಮುತ್ತ ವಾಹನ ದಟ್ಟಣೆಯಾಗಲಿದೆ ಎಂದೂ, ಐಪಿಸಿ ಸೆಕ್ಷನ್ 144ರಡಿ ರಾಜ್ಘಾಟ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿರುವ ಕಾರಣ ಸತ್ಯಾಗ್ರಹಕ್ಕೆ ಅನುಮತಿ ನೀಡಿಲ್ಲ.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ರಾಜ್ಘಾಟ್ನಲ್ಲಿ ಐದಕ್ಕಿಂತ ಹೆಚ್ಚು ಮಂದಿ ಸೇರಲು ಅವಕಾಶ ನೀಡಲ್ಲ ಎಂದು ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಗಾಂಧಿ ಒಳಗೊಂಡಂತೆ ಕಾಂಗ್ರೆಸ್ ನಾಯಕರ ದಂಡು ರಾಜ್ಘಾಟ್ನತ್ತ ತೆರಳಿದೆ.
ADVERTISEMENT
ADVERTISEMENT