Rain ದಕ್ಷಿಣ ಕನ್ನಡ: ನಿಯಮ ಉಲ್ಲಂಘಿಸಿದರೆ ಪ್ರವಾಸಿಗರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಪ್ರಕೃತಿ ವಿಕೋಪದ ಆತಂಕ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿಯಮಗಳನ್ನು ಉಲ್ಲಂಘಿಸುವ ಪ್ರವಾಸಿಗರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್​ ಎಚ್ಚರಿಕೆ ನೀಡಿದ್ದಾರೆ.

ಪ್ರವಾಸಿಗರು ಭೇಟಿ ನೀಡುವ ವೇಳೆ ಎಚ್ಚರಿಕೆಯಿಂದ ಇರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಸಮುದ್ರ ತೀರಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದ್ದು, ಬೀಚ್​ಗಳಲ್ಲಿ ಹೋಂ ಗಾರ್ಡ್​ಗಳನ್ನು ನಿಯೋಜಿಸಲಾಗಿದೆ.

ಧಾರ್ಮಿಕ ಕೇಂದ್ರಗಳಾದ ಕಟೀಲು, ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಹೋಂ ಗಾರ್ಡ್​ಗಳನ್ನು ನಿಯೋಜಿಸಲಾಗಿದ್ದು, ನದಿ-ತೊರೆ,ಜಲಪಾತಗಳಿಗೆ ಇಳಿಯದಂತೆ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾಲ್ನಡಿಗೆ ( ಟ್ರೆಕ್ಕಿಂಗ್​)ಯನ್ನು ನಿರ್ಬಂಧಿಸಲಾಗಿದೆ. ಸೇತುವೆಗಳ ಬಳಿ ಎಚ್ಚರಿಕೆ ಫಲಕವನ್ನು ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಒಂದು ವಾರದಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ 7 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಭೂಕುಸಿತ ಆಗಬಹುದಾದ ಪ್ರದೇಶಗಳಿದ್ದು, ಅವುಗಳಲ್ಲಿ ಬಹುತೇಕ ಚಾರ್ಮಾಡಿ ಘಾಟ್​ನಲ್ಲಿದೆ. ಮಂಗಳೂರು ನಗರ ಪಾಲಿಕೆ ವಯಲದಲ್ಲಿ 18 ಪ್ರವಾಹಪೀಡಿತ ಪ್ರದೇಶಗಳಿವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here