ತಮಿಳುನಾಡಿನ ಉನ್ನತ ಪೊಲೀಸ್ ಅಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮುತ್ತೂರು ವಲಯದ ಡಿಐಜಿ ವಿಜಯ್ ಕುಮಾರ್ ಸಾವಿಗೆ ಶರಣಾಗಿದ್ದಾರೆ.
ತಮ್ಮ ಗನ್ಮ್ಯಾನ್ನ ಸರ್ವಿಸ್ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. 45 ವರ್ಷದ ಇವರು ತಮಿಳುನಾಡಿನ ತೇಣಿ ಮೂಲದವರು.
ಕೊಯಮುತ್ತೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವತ್ತು ಬೆಳಗ್ಗೆ 6.45ರ ವೇಳೆಗೆ ವಾಕಿಂಗ್ನಿಂದ ವಾಪಸ್ ಆದ ಬಳಿಕ ತಮ್ಮ ಭದ್ರತಾ ಸಿಬ್ಬಂದಿಯ ರಿವಾಲ್ವರ್ ಪಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ ಡಿಐಜಿ ವಿಜಯ್ಕುಮಾರ್ ಖಿನ್ನತೆಗೆ ಒಳಗಾಗಿದ್ದರು ಮತ್ತು ಅವರಿಗೆ ನಿದ್ರೆಯ ಕೊರತೆ ಕಾರಣದಿಂದ ಚಿಕಿತ್ಸೆಯನ್ನೂ ನೀಡಲಾಗ್ತಿತ್ತು. ಕೆಲ ದಿನಗಳ ಹಿಂದೆಯಷ್ಟೇ ಅವರ ಕುಟುಂಬದವರನ್ನೂ ಕೊಯಮುತ್ತೂರಿಗೆ ಕರೆಸಿಕೊಳ್ಳಲಾಗಿತ್ತು.
ADVERTISEMENT
ADVERTISEMENT