ADVERTISEMENT
ಕರ್ನಾಟಕದಲ್ಲಿ ತಮ್ಮನ್ನೇ ಮುಖ್ಯಮಂತ್ರಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪಟ್ಟು ಹಿಡಿದಿರುವ ಹೊತ್ತಲ್ಲೇ ಇತ್ತ ಕೇಂದ್ರೀಯ ತನಿಖಾ ದಳ (ಸಿಬಿಐ) ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
2018ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ವೇಳೆ ಡಿಕೆಶಿ ಅಕ್ರಮ ಸಂಪತ್ತು ಗಳಿಸಿದ್ದರು ಎಂಬ ಆರೋಪದಡಿ ಸಿಬಿಐ ತನಿಖೆಗೆ ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿತ್ತು.
ಈ ಒಪ್ಪಿಗೆಯನ್ನು ಪ್ರಶ್ನಿಸಿ ಡಿಕೆಶಿವಕುಮಾರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಡಿಕೆಶಿ ಅರ್ಜಿ ಆಧರಿಸಿ ಕರ್ನಾಟಕ ಹೈಕೋರ್ಟ್ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು.
ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ADVERTISEMENT