ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಸರಳ ಬಹುಮತಕ್ಕೆ ಬೇಕಿರುವ ಸ್ಥಾನಗಳನ್ನು ಕಾಂಗ್ರೆಸ್ ಗಳಿಸುವತ್ತ ಯಶಸ್ವಿಯಾಗಿದೆ. ಈ ಮಧ್ಯೆ ಪಕ್ಷದ ಶಾಸಕರನ್ನು ಇತರ ಪಕ್ಷಗಳು ಸೆಳೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ ಟ್ರಬಲ್ ಶೂಟರ್ ಕರ್ನಾಟಕ ಡಿಸಿಎಂ ಡಿ.ಕೆ ಶಿವಕುಮಾರ್ ಈಗಾಗಲೇ ಹೈದರಾಬಾದ್ ತಲುಪಿದ್ದಾರೆ. ಅವರ ಜತೆ ಕರ್ನಾಟಕದ ಇತರ ಕೆಲ ಮಂದಿ ಸಚಿವರೂ ಸಾಥ್ ನೀಡಿದ್ದಾರೆ.
ಗೆದ್ದ ಅಭ್ಯರ್ಥಿಗಳನ್ನು ಸೇಫ್ ಗಾರ್ಡ್ ಮಾಡುವ ನಿಟ್ಟಿನಲ್ಲಿ ಹೈದರಾಬಾದ್ನ ತಾಜ್ ಕೃಷ್ಣ ಹೋಟೆಲ್ನ ಹೊರಗೆ ಬಸ್ಗಳು ಸಜ್ಜಾಗಿ ನಿಂತಿದೆ. ಫಲಿತಾಂಶ ಪ್ರಕಟಣೆಯ ಬಳಿಕ ಪಕ್ಷದ ಶಾಸಕರನ್ನು ಬೆಂಗಳೂರು ಅಥವಾ ಕಾಂಗ್ರೆಸ್ ಆಡಳಿತ ಇರುವ ಯಾವುದೇ ರಾಜ್ಯಕ್ಕೆ ಸ್ಥಳಾಂತರಿಸುವ ಬಗ್ಗೆ ತೀರ್ಮಾನಿಸಲಾಗುತ್ತೆ.