ನಾನು ಯಾರ ಉಸಾಬರಿಗೂ (ತಂಟೆಗೆ) ಹೋಗಲ್ಲ. ಆದ್ರೆ ನನ್ನ ಉಸಾಬರಿಗೆ ಬಂದ್ರೆ ಸುಮ್ಮನೆ ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷದೊಳಗೇ ಇರುವ ತಮ್ಮ ವಿರೋಧಿಗಳಿಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ತಮ್ಮ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ತಮ್ಮ ರಾಜಕೀಯ ವಿರೋಧಿಗಳಿಗೆ ಶೆಟ್ಟರ್ ಸಂದೇಶ ರವಾನಿಸಿದ್ದಾರೆ.
ಜಗದೀಶ್ ಶೆಟ್ಟರ್ ಸರಳ ಸಜ್ಜನ ರಾಜಕಾರಣಿ ನಿಜ. ನಾನಾಯ್ತು, ನನ್ನ ಕೆಲಸ ಅಷ್ಟೇ. ನಾನು ಯಾರ ಉಸಾಬರಿಗೆ(ತಂಟೆಗೆ) ನಾನು ಹೋಗುವುದಿಲ್ಲ. ಆದ್ರೆ ನನ್ನ ಉಸಾಬರಿಗೆ ಬಂದ್ರೆ ಸುಮ್ಮನೆ ಬಿಡುವುದಿಲ್ಲ
ಎಂದು ಶೆಟ್ಟರ್ ಅವರು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಆಗಲು ಒಪ್ಪದೇ ಸಂಪುಟದಿಂದ ಹೊರಗುಳಿದರು.
ಆ ಬಳಿಕ ಬಿಜೆಪಿ ಪಕ್ಷದ ನಾಯಕರೇ ಶೆಟ್ಟರ್ ಅವರನ್ನು ಮೂಲೆಗುಂಪು, ಕಡೆಗಣನೆ ಮಾಡುವ ಪ್ರಯತ್ನಗಳನ್ನೂ ಮಾಡುತ್ತಿದ್ದಾರೆ.
ಇದಲ್ಲದೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸದ್ಯ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶೆಟ್ಟರ್ ಅವರಿಗೆ ಬಿಜೆಪಿಯಲ್ಲೇ ಟಿಕೆಟ್ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಗುಸುಗುಸು ಮಧ್ಯೆ ಶೆಟ್ಟರ್ ಅವರು ಕೊಟ್ಟಿರುವ ಎಚ್ಚರಿಕೆ ಮಹತ್ವ ಪಡೆದಿದೆ.
ADVERTISEMENT
ADVERTISEMENT