ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ.
ಬಿಜೆಪಿ ಪಕ್ಷದ ಮಾಜಿ ಸಂಸದ ಡಾ ಜಿ ವಿವೇಕಾನಂದ (G. Vivekanand) ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸಚಿವರೂ ಆಗಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಭಾರದ ಹೃದಯದೊಂದಿಗೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
ಜಿ ವಿವೇಕ್ ವೆಂಕಟಸ್ವಾಮಿ ಎಂದೂ ಕರೆಯಲಾಗುವ ಈ ನಾಯಕ 2004 ಮತ್ತು 2009ರಲ್ಲಿ ತೆಲಂಗಾಣದ ಪೆಡಪಲ್ಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನಿಂದಲೇ ಗೆದ್ದು ಸಂಸದರಾಗಿದ್ದರು.
2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಇವರು ಈಗ ಮತ್ತೆ ಕಾಂಗ್ರೆಸ್ಗೆ ಮರಳುತ್ತಿದ್ದಾರೆ.
ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಇವರು ವಿ6 ತೆಲುಗು ನ್ಯೂಸ್ ಚಾನೆಲ್ನ ಮಾಲೀಕರೂ ಹೌದು. ಹೈದ್ರಾಬಾದ್ ಕ್ರಿಕೆಟ್ ಸಂಘದ ಅಧ್ಯಕ್ಷರೂ ಆಗಿದ್ದರು.
ಪೆಡ್ಡಪಲ್ಲಿ ಲೋಕಸಭಾ ಕ್ಷೇತ್ರದಲ್ಲಿ 7 ವಿಧಾನಸಭಾ ಕ್ಷೇತ್ರಗಳಿದ್ದು ಮೂರು ಎಸ್ಸಿ ಮೀಸಲು ಕ್ಷೇತ್ರಗಳಿವೆ. 7 ಕ್ಷೇತ್ರಗಳ ಪೈಕಿ 5ರಲ್ಲಿ ಬಿಆರ್ಎಸ್ ಮತ್ತು 2ರಲ್ಲಿ ಕಾಂಗ್ರೆಸ್ ಗೆದ್ದಿತ್ತು.
ಜಿ ವಿವೇಕಾನಂದ ಅವರು ಕಾಂಗ್ರೆಸ್ಗೆ ಮತ್ತೆ ವಾಪಸ್ ಆಗುತ್ತಿರುವುದು ಪಕ್ಷಕ್ಕೆ ದೊಡ್ಡ ಲಾಭ ತಂದುಕೊಡಲಿದೆ ಎಂದು ಭಾವಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಹಣ ಮತ್ತು ಗೌರವ ಗಳಿಸಲು ಬಯಸುತ್ತಾರೆ. ಆದ್ರೆ ಇದು ಕೆಲವರಿಗೆ ಕನಸು ನಾನಸಾಗುತ್ತದೆ. ಇನ್ನು ಕೆಲವರಿಗೆ ಕನಸು ಹಾಗೆ ಉಳಿದುಬಿಡುತ್ತದೆ. ...
ವೀರಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಇಂದು ಸಿದ್ದರಾಮಯ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದೆ. ನ.22 ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದ ಭಯೋತ್ಪಾದರ ವಿರುದ್ಧದ ಕಾರ್ಯಾಚರಣೆ...
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮುಚ್ಚಳಿಕೆ ಬರೆಸಿ ಪ್ರಕರಣ ದಾಖಲಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ತನಿಖೆಗೆ ಆದೇಶಿಸಲಾಗಿದೆ. ಸ್ಪೀಕರ್ ಯು ಟಿ ಖಾದರ್ ಅವರು...
ಚಳಿಗಾಲದಲ್ಲಿ ಹೆಚ್ಚಾಗಿ ನಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ಚರ್ಮವು ಡ್ರೈ ಆಗುವುದರ ಜೊತೆಗೆ ಮುಖದ ಮೇಲೆ ಸೋಂಕುಗಳು ಹೆಚ್ಚು ಕಂಡುಬರುತ್ತದೆ. ಆದಾಗ್ಯೂ, ಮನೆಯಲ್ಲಿ ಸುಲಭ...