Friday, May 23, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ವಿಧಾನಸಭೆ ಮಾಜಿ ಸ್ಪೀಕರ್​, ಶಾಸಕ ರಮೇಶ್​ ಕುಮಾರ್​ ಕಾಂಗ್ರೆಸ್​​ ಬಿಡುವ ಸಾಧ್ಯತೆ

by
26th May 2022
in News
0
ವಿಧಾನಸಭೆ ಮಾಜಿ ಸ್ಪೀಕರ್​, ಶಾಸಕ ರಮೇಶ್​ ಕುಮಾರ್​ ಕಾಂಗ್ರೆಸ್​​ ಬಿಡುವ ಸಾಧ್ಯತೆ
0
SHARES
0
VIEWS
Share on FacebookShare on Twitter

ವಿಧಾನಸಭೆ ಮಾಜಿ ಸ್ಪೀಕರ್​ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್​ ಕುಮಾರ್​ ಕಾಂಗ್ರೆಸ್​ ಪಕ್ಷ ಬಿಡುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದು ಮೂಲಗಳು ಪ್ರತಿಕ್ಷಣ ನ್ಯೂಸ್​ಗೆ ತಿಳಿಸಿವೆ.

2023ರ ವಿಧಾನಸಭಾ ಚುನಾವಣೆ ಘೋಷಣೆಗೂ ಮೊದಲೇ ರಮೇಶ್​ ಕುಮಾರ್​ ಕಾಂಗ್ರೆಸ್​ ಪಕ್ಷ ತ್ಯಜಿಸುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಆಮ್​ ಆದ್ಮಿ ಪಕ್ಷದ ಬಗ್ಗೆ ಒಲವು ಹೊಂದಿರುವ ರಮೇಶ್​ ಕುಮಾರ್​​ ಆ ಪಕ್ಷವನ್ನು ಸೇರಿಕೊಳ್ಳಬಹುದು ಎನ್ನಲಾಗ್ತಿದೆ. ಆಮ್​ ಆದ್ಮಿ ಪಾರ್ಟಿ ಕೂಡಾ ರಮೇಶ್​ ಕುಮಾರ್​ ಅವರನ್ನು ಕರೆದುಕೊಂಡು ಬರಲು ಪ್ರಯತ್ನಿಸುತ್ತಿದೆ.

ಕಾಂಗ್ರೆಸ್​ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸುತ್ತಿರುವ ರಮೇಶ್​ ಕುಮಾರ್​ ಆಮ್​ ಆದ್ಮಿ ಪಾರ್ಟಿಯನ್ನು ಹೊಗಳಿ ಟ್ವೀಟ್​ಗಳನ್ನು ಮಾಡುತ್ತಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಕೇಜ್ರಿವಾಲ್​ ಸರ್ಕಾರದ ಶೈಕ್ಷಣಿಕ ಕ್ಷೇತ್ರದ ಸಾಧನೆಗಳ ಬಗ್ಗೆ ಖುದ್ದು ದೆಹಲಿಯಲ್ಲಿನ ಶಾಲೆಗಳಿಗೆ ತೆರಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ ಗಂಜಿ ಹುಡುಕಿಕೊಳ್ಳುತ್ತಿದೆ:

ಬಾಗೇಪಲ್ಲಿಯಲ್ಲಿ ಸಿಪಿಐಎಂನ ಮಾಜಿ ನಾಯಕ ಜಿ ವಿ ಶ್ರೀರಾಮರೆಡ್ಡಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತಾಡಿದ್ದ ರಮೇಶ್​ ಕುಮಾರ್​ ಕಾಂಗ್ರೆಸ್​ ಗಂಜಿ ಹುಡುಕಿಕೊಳ್ಳುತ್ತಿದೆ ಎನ್ನುವಷ್ಟರ ಮಟ್ಟಿಗೆ ವಾಗ್ದಾಳಿ ನಡೆಸಿದ್ದರು.

ADVERTISEMENT
ADVERTISEMENT

ರಾಷ್ಟ್ರಧ್ವಜದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದ ಮತ್ತು ಕೋಮುವಾದವನ್ನು ಜೀವಾಳ ಮಾಡಿಕೊಂಡಿದ್ದ ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ ಬಲಿರಾಮ್​ ಹೆಡಗೇವಾರ್​  ವಿಚಾರಗಳು ಪಠ್ಯ ಸೇರುತ್ತಿದ್ದರೂ ಕಾಂಗ್ರೆಸ್​ ಪ್ರತಿಭಟಿಸದಿರುವುದು ಸೋಜಿಗ.

ಮಕ್ಕಳು ಓದುವ ಪಠ್ಯಪುಸ್ತಕಗಳಲ್ಲಿ ಕೋಮುವಾದಿಗಳ ಅಟ್ಟಹಾಸ ಮೆರೆಯುತ್ತಿದೆ. ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಈ ಹೊತ್ತಿನ ಗಂಜಿ ಹುಡುಕಿಕೊಳ್ಳುತ್ತಿವೆ. ಈ ಪಕ್ಷಗಳಿಗೆ ಕೇವಲ ಹೊತ್ತು ಹೊತ್ತಿಗೆ ಗಂಜಿಯೇ ಮುಖ್ಯವಾಗಿದೆ ಎಂದು ಕಾಂಗ್ರೆಸ್​ ವಿರುದ್ಧವೇ ಕಿಡಿಕಾರಿದ್ದಾರೆ.

ಆಮ್​ ಆದ್ಮಿ ಪಾರ್ಟಿ ಹೊಗಳಿ ಟ್ವೀಟ್​:

ಇನ್ನು ಶೇಕಡಾ 1ರಷ್ಟು ಕಮಿಷನ್​ ಪಡೆದ ಆರೋಪದಡಿ ಪಂಜಾಬ್​ನಲ್ಲಿ ತನ್ನದೇ ಸರ್ಕಾರದ ಸಚಿವನನ್ನು ವಜಾಮಾಡಿ ಆ ಮಂತ್ರಿಯನ್ನು ಬಂಧಿಸಿದ ಆಮ್​ ಆದ್ಮಿ ಪಕ್ಷದ ಕ್ರಮದ ಬಗ್ಗೆ ರಮೇಶ್​ ಕುಮಾರ್​ ಹೊಗಳಿ ಟ್ವೀಟಿಸಿದ್ದಾರೆ.

ನೀವು ದೀರ್ಘಕಾಲದ ರಾಜಕಾರಣಿ ಅಲ್ಲದಿದ್ದರೂ ಈ ದೇಶವನ್ನು ಸ್ವಚ್ಛಗೊಳಿಸಬೇಕೆಂಬ ನಿಮ್ಮ ಉದ್ದೇಶವನ್ನು ಸಾಬೀತುಪಡಿಸಿದ್ದೀರಿ. ಈ ದೇಶದಲ್ಲಿ ಸಾರ್ವಜನಿಕ ಜೀವನಕ್ಕೆ ಅಗತ್ಯ ಇರುವ ಹೊಸ ದೃಷ್ಟಿಕೋನವನ್ನು ನೀಡಿದ್ದೀರಿ ಎಂದು ರಮೇಶ್​ ಕುಮಾರ್​ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ರನ್ನು ಹೊಗಳಿದ್ದಾರೆ.

2/2 @ArvindKejriwal Though you are not a long standing leader or politician, you have proven that your intent to cleanse the country is enough to bring in the right people. You have provided a new dimension to the public life in this country which was much needed.

— K. R. Ramesh Kumar (@KRRameshKumar1) May 24, 2022

 

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: AAPCongressRamesh Kumar
ADVERTISEMENT
Previous Post

ಟಿಕ್​ಟಾಕ್ ಸ್ಟಾರ್ ಆದ​​ ಮುಸ್ಲಿಂ ಮಹಿಳೆ : ಉಗ್ರರಿಂದ ಗುಂಡಿಟ್ಟು ಹತ್ಯೆ

Next Post

ಅಕ್ರಮ ಹಣ ವರ್ಗಾವಣೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್​ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ಅಕ್ರಮ ಹಣ ವರ್ಗಾವಣೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್​ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!