ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸಿದ್ದರಾಮಯ್ಯ ಬರೆದಿರುವ ಪತ್ರದಂತೆ ಈ ನಕಲಿ ಪತ್ರವನ್ನು ಸೃಷ್ಟಿಸಲಾಗಿದ್ದು, ಆ ಪತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿದ್ದರಾಮಯ್ಯನವರ ಹೆಸರಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
ಈ ನಕಲಿ ಪತ್ರದ ಬಗ್ಗೆ ಸಿದ್ದರಾಮಯ್ಯನವರು ತಮ್ಮ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ.
ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ.