ಜೆಡಿಎಸ್​ ಪಕ್ಷ ಉಳಿಸಲು ಕುಟುಂಬ ರಾಜಕಾರಣ ಅನಿವಾರ್ಯ – ಮಾಜಿ ಸಿಎಂ HDK ಸಮರ್ಥನೆ.

ಜೆಡಿಎಸ್​​ ಪಕ್ಷ ಉಳಿಸಲು ಕುಟುಂಬ ರಾಜಕಾರಣ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಕುಟುಂಬ ರಾಜಕೀಯದ ಬಗ್ಗೆ ಮಾತಾಡುತ್ತೇನೆ. ಅನಿವಾರ್ಯತೆ ಇದ್ದಾಗ ಕುಟುಂಬದಿಂದ ಅಭ್ಯರ್ಥಿ ಮಾಡಿದ್ದೇವೆ.  

ರಾಮನಗರ, ಚನ್ನಪಟ್ಟಣದಲ್ಲಿ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ನಾನು ಎರಡು ಕಡೆ ನಿಂತೆ. 

ಮಧುಗಿರಿಯಲ್ಲಿ ಕೊನೆ ಘಳಿಗೆಯಲ್ಲಿ ಪಕ್ಷ ಉಳಿಸಲು ಅನಿತಾ ಚುನಾವಣೆಗೆ ನಿಂತರು. 

ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ. ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲ 

ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಳೂರಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಬಾರಿ ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ, ಚನ್ನಪಟ್ಟಣದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಕೆ ಆರ್​ ಪೇಟೆಯಲ್ಲಿ ಹೆಚ್​ ಡಿ ರೇವಣ್ಣ, ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡುವ ನಿರೀಕ್ಷೆ ಇದೆ. ಈ ಮೂಲಕ ಒಂದೇ ಕುಟುಂಬದ ಐವರು ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here