ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ – ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾವು

ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ ಆಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾವನ್ನಪ್ಪಿದ್ದಾರೆ.
ಸೌದಿ ಅರೇಬಿಯಾದ ರಿಯಾದ್​ ಪ್ರಾಂತ್ಯದ ಖುರೈಸ್​ನಲ್ಲಿ ರಸ್ತೆ ದಾಟುತ್ತಿದ್ದ ಒಂಟೆಗೆ ಕಾರು ಡಿಕ್ಕಿ ಆಗಿದೆ.
ಕಾರಿನಲ್ಲಿದ್ದ ಹಳೆಯಂಗಡಿ ಬಳಿಯ ಕದಿಕೆ ನಿವಾಸಿ 23 ವರ್ಷದ ರಿಜ್ವಾನ್​, ಸುರತ್ಕಲ್​ನ ಕೃಷ್ಣಾಪುರದ ಶಿಹಾಬ್​ ಮತ್ತು ಮಂಗಳೂರಿನ ಬೆಂಗರೆ ನಿವಾಸಿ ಅಕೀಲ್​​ ಮೃತಪಟ್ಟಿದ್ದಾರೆ.
ಇವರ ಜೊತೆಗಿದ್ದ ಬಾಂಗ್ಲಾದೇಶದ ನಾಸೀರ್​ ಕೂಡಾ ಸಾವನ್ನಪ್ಪಿದ್ದಾರೆ.
ರಿಜ್ವಾನ್​ ನಾಲ್ಕು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ಹೋಗಿದ್ದರು.
ರಾತ್ರಿ ವೇಳೆ ಕೆಲಸಕ್ಕೆ ತೆರಳುವ ವೇಳೆ ಹಠಾತ್ತನೇ ಒಂಟೆಯೊಂದು ಕಾರಿಗೆ ಅಡ್ಡಬಂದಿದೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here