ವಂಚನೆ ಪ್ರಕರಣ ಸಂಬಂಧಿಸಿದಂತೆ ನಟ, ನಿರ್ಮಾಪಕ ವಿರೇಂದ್ರ ಬಾಬು ಅವರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ವಿರೇಂದ್ರ ಬಾಬು ಅವರು ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬುವರು ದೂರು ದಾಖಲಿಸಿದ್ದರು.
ಇಂದು ಶುಕ್ರವಾರ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುರನ್ನು ವಶಕ್ಕೆ ಪಡೆದಿದ್ದಾರೆ.