Friday, May 16, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಜನಾರ್ದನ ರೆಡ್ಡಿ ಹೊಸ ಪಕ್ಷದ ಅಸಲಿ ಲೆಕ್ಕಾಚಾರ – ಇದು ಬಿಜೆಪಿಯೇ ಹೊಸೆದ ದಾಳ

PratikshanaNews by PratikshanaNews
13th December 2022
in News
0
Sriramulu and Gali Janardhan Reddy

Sriramulu and Gali Janardhan Reddy

0
SHARES
24
VIEWS
Share on FacebookShare on Twitter
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ, ಸದ್ಯಕ್ಕೆ ತವರು ಜಿಲ್ಲೆ ಬಳ್ಳಾರಿಗೆ ಹೋಗುವುದಕ್ಕೂ ಅನುಮತಿ ಪಡೆಯಬೇಕಾಗಿರುವ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಲಿದ್ದಾರೆ. ಹೊಸ ಪಕ್ಷ ಸ್ಥಾಪನೆ ಕೆಲ ತಿಂಗಳ ಹಿಂದಿನ ಸುದ್ದಿಯಾದರೂ ಈ ಪಕ್ಷದ ಉದ್ಭವದಿಂದ ಯಾರಿಗೆ ರಾಜಕೀಯ ನಷ್ಟ ಎನ್ನುವುದು ಕುತೂಹಲಕಾರಿ.
ಮೇಲ್ನೋಟಕ್ಕೆ ರಾಜಕೀಯ ವಿಶ್ಲೇಷಕರ ಪ್ರಕಾರ ರೆಡ್ಡಿ ಹೊಸ ಪಕ್ಷ ರಚಿಸಿದರೆ ಅದರ ಲಾಭ ಕಾಂಗ್ರೆಸ್​​ಗೆ, ನಷ್ಟ ಬಿಜೆಪಿಗೆ. ಅಂದರೆ ಬಿಜೆಪಿಗೆ ಬರುವ ಮತಗಳನ್ನು ರೆಡ್ಡಿ ಪಕ್ಷ ತಿಂದು ಹಾಕಲಿದೆ ಎನ್ನುವುದು ಅಂದಾಜು.
ಬಿಜೆಪಿಯದ್ದೇ ಬೆಂಬಲ:
ಆದರೆ ಮಾಹಿತಿಗಳ ಪ್ರಕಾರ ಜನಾರ್ದನ ರೆಡ್ಡಿಗೆ ಹೊಸ ಪಕ್ಷ ರಚಿಸುವಂತೆ ಸಲಹೆ ಕೊಟ್ಟಿರುವುದೇ ಬಿಜೆಪಿ. ಇದಕ್ಕೆ ಎರಡು ಕಾರಣಗಳಿವೆ.
1) ಗಣಿ ಪ್ರಕರಣದಲ್ಲಿ ಆರೋಪಿ ಆಗಿರುವ, 2008ರಿಂದ 2013ರವರೆಗೆ ರಾಜ್ಯ ರಾಜಕೀಯವನ್ನೇ ಅಲ್ಲೋಲಕಲ್ಲೋಲವಾಗಿಸಿದ  ರೆಡ್ಡಿಯನ್ನು ಚುನಾವಣೆಯ ಹೊತ್ತಲ್ಲಿ ಪಕ್ಷಕ್ಕೆ ಸೇರಿಸಿಕೊಂಡರೆ ಅದು ಕಾಂಗ್ರೆಸ್​​ ಕೈಗೆ ಪ್ರಬಲ ಅಸ್ತ್ರವಾಗಿ ಬಿಜೆಪಿ ಇಡೀ ರಾಜ್ಯದಲ್ಲೇ ಮುಜುಗರವನ್ನು ಅನುಭವಿಸಬೇಕಾಗುತ್ತದೆ, ರಾಜ್ಯಾದ್ಯಂತ ಬಿಜೆಪಿಗೆ ಚುನಾವಣೆ ಹಿನ್ನಡೆ ಆಗಬಹುದು ಎನ್ನುವುದು ಬಿಜೆಪಿ ನಾಯಕರ ಚಿಂತೆ.
2) ಒಂದು ವೇಳೆ ರೆಡ್ಡಿ ತಟಸ್ಥವಾಗಿ ಉಳಿದರೆ ಆಗ ರೆಡ್ಡಿ ನಿಷ್ಠ ಮತಗಳು ಬಿಜೆಪಿಗೆ ಬರದೇ ಕಾಂಗ್ರೆಸ್​​ಗೆ ಹೋಗಬಹುದು.
ಈ ಎರಡು ಕಾರಣಗಳಿಗಾಗಿ ಹೊಸ ಪಕ್ಷವನ್ನು ರಚಿಸಿ ಚುನಾವಣಾ ಅಖಾಡಕ್ಕೆ ಧುಮುಕುವಂತೆ ಬಿಜೆಪಿಯೇ ಜನಾರ್ದನ ರೆಡ್ಡಿಗೆ ಸೂಚಿಸಿದೆ.
ರೆಡ್ಡಿ ಹೊಸ ಪಕ್ಷ ರಚನೆಯಿಂದ ಬಿಜೆಪಿ ತನಗೆ ಆಗಬಹುದಾದ ರಾಜಕೀಯ ಲಾಭಗಳ ಬಗ್ಗೆ ಯೋಚಿಸಿದೆ.
1) ರೆಡ್ಡಿ ಹೊಸ ಪಕ್ಷವನ್ನು ರಚಿಸಿದರೆ ಆಗ ರೆಡ್ಡಿ ನಿಷ್ಠ ಮತಗಳು ನೇರವಾಗಿ ರೆಡ್ಡಿಯ ಹೊಸ ಪಕ್ಷಕ್ಕೆ ಹೋಗುತ್ತವೆ. ಈ ಮತಗಳು ಕಾಂಗ್ರೆಸ್​​ಗೆ ಹೋಗದಂತೆ ರೆಡ್ಡಿ ಪಕ್ಷವನ್ನೇ ತಡೆಗೋಡೆಯಾಗಿ ಬಳಸಿಕೊಳ್ಳಬಹುದು ಮತ್ತು ಆ ಮೂಲಕ ಬಿಜೆಪಿ ಗೆಲುವಿಗೆ ಸಹಕಾರಿಯಾಗುತ್ತದೆ.
2) ಅಧಿಕಾರದ ಲಾಲಸೆಗಾಗಿ ಗಣಿ ಹಗರಣದ ಆರೋಪಿಯನ್ನು ಪಕ್ಷಕ್ಕೆ ಸೇರಿಸಿಕೊಂಡರು ಎಂಬ ಕಳಂಕದಿಂದ ಬಿಜೆಪಿ ಮುಕ್ತವಾಗುತ್ತದೆ.
ಚುನಾವಣೆ ಬಳಿಕ ಬಿಜೆಪಿ ಜೊತೆಗೆ ಹೋಗುವ ಲೆಕ್ಕಾಚಾರ:
ಇನ್ನು ನಾಲ್ಕು ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ನಡೆಯಲಿದೆ. ಫಲಿತಾಂಶ ಬಂದ ಬಳಿಕ ಜನಾರ್ದನ ರೆಡ್ಡಿ ಆಗಿನ ಪರಿಸ್ಥಿತಿ ನೋಡಿಕೊಂಡು ಬಿಜೆಪಿ ಜೊತೆ ಹೋಗುವ ಬಗ್ಗೆ ತೀರ್ಮಾನಿಸಲಿದ್ದಾರೆ. ಅಲ್ಲಿಯವರೆಗೂ ಮೇಲ್ನೋಟಕ್ಕಾದರೂ ರೆಡ್ಡಿ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಿದ್ದಾರೆ. ಆ ಮೂಲಕ ರೆಡ್ಡಿಗೂ ಬಿಜೆಪಿಗೂ ಸಂಘರ್ಷ ಇದೆ ಎನ್ನುವುದನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮತ್ತು ರೆಡ್ಡಿ ಇಬ್ಬರೂ ಮಾಡಲಿದ್ದಾರೆ.
2013ರಲ್ಲೂ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಅಧಿಕಾರ ಕಳೆದುಕೊಂಡರೂ ಯಡಿಯೂರಪ್ಪನವರು ಮತ್ತು ಶ್ರೀರಾಮುಲು ಮತ್ತೆ ವಾಪಸ್​ ಬಿಜೆಪಿಗೆ ಬಂದಿದ್ದರು. ಇದೇ ಸೂತ್ರವನ್ನು 2023ರ ಚುನಾವಣೆ ಬಳಿಕ ಜನಾರ್ದನ ರೆಡ್ಡಿ ಅನುಸರಿಸುವ ಬಗ್ಗೆ ಬಿಜೆಪಿ ಮತ್ತು ರೆಡ್ಡಿ ಪಾಳಯದಲ್ಲಿ ಆಲೋಚನೆ ಆಗಿದೆ.
30 ಕ್ಷೇತ್ರಗಳು ಗುರಿ:
ಕಲ್ಯಾಣ ಕರ್ನಾಟಕ ಭಾಗದ 30 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾರ್ದನ ರೆಡ್ಡಿ ಪಕ್ಷ ಅಖಾಡಕ್ಕೆ ಧುಮುಕಲಿದೆ. ಸದ್ಯದ ಅಂದಾಜಿನ ಪ್ರಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್​ ಅತ್ಯಧಿಕ ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಈ ಭಾಗದಲ್ಲೇ ರೆಡ್ಡಿ ರಾಜಕೀಯ ಪ್ರಭಾವಿತವಾದರೆ ಆಗ ಅದರ ನಷ್ಟ ಕಾಂಗ್ರೆಸ್​​ಗೇ ಆಗಬಹುದು.
ಪಕ್ಷದ ಹೆಸರು:
ಜನಾರ್ದನ ರೆಡ್ಡಿ ತಮ್ಮ ಹೊಸ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಪಕ್ಷ ಎಂದು ನಾಮಕರಣ ಮಾಡಲಿದ್ದಾರೆ.
ಜಗನ್​ ರೆಡ್ಡಿ ಜೊತೆ:
ತಮ್ಮ ಹೊಸ ಪಕ್ಷ ಸ್ಥಾಪನೆಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್​ ರೆಡ್ಡಿ ಅವರ ಜೊತೆಗೆ ಈಗಾಗಲೇ ಜನಾರ್ದನ ರೆಡ್ಡಿ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಜಗನ್​ ಪಕ್ಷ ವೈಎಸ್​ಆರ್​ ಕಾಂಗ್ರೆಸ್​ನ ಚಿಹ್ನೆಯನ್ನೇ ರೆಡ್ಡಿ ತಮ್ಮ ಹೊಸ ಪಕ್ಷದ ಚಿಹ್ನೆಯಾಗಿ ಕರ್ನಾಟಕದಲ್ಲಿ ಬಳಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
2018ರಲ್ಲಿ ಆಂಧ್ರದಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಪರವೇ ವಾಲಿರುವ, ಸಿಬಿಐ ದಾಖಲಿಸಿರುವ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಜಗನ್​ ರೆಡ್ಡಿ ಕರ್ನಾಟಕದಲ್ಲಿ ತಮ್ಮ ಆಪ್ತ ಜನಾರ್ದನ ರೆಡ್ಡಿ ಸ್ಥಾಪಿಸುವ ಹೊಸ ಪಕ್ಷ ಬಿಜೆಪಿ ವಿರುದ್ಧವಾಗಿದ್ದರೆ ಹೇಗೆ ಸಹಕಾರ ಕೊಡುತ್ತಾರೆ ಎನ್ನುವುದೇ ಪ್ರಶ್ನೆ.
ADVERTISEMENT
ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Sriramulu and Gali Janardhan Reddy
ADVERTISEMENT
Previous Post

ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ತು , ಶ್ರೀ ಕ್ಷೇತ್ರ ಶ್ರವಣಬೆಳಗೊಳ ಸಹಯೋಗದಲ್ಲಿ ಕಾಯಾ೯ಗಾರ

Next Post

ವೈ ಎಸ್​ ವಿ ದತ್ತಾ ಅಧಿಕೃತವಾಗಿ ಕಾಂಗ್ರೆಸ್​​ಗೆ ಸೇರ್ಪಡೆಗೆ ವೇದಿಕೆ ಸಿದ್ಧ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ವೈ ಎಸ್​ ವಿ ದತ್ತಾ ಅಧಿಕೃತವಾಗಿ ಕಾಂಗ್ರೆಸ್​​ಗೆ ಸೇರ್ಪಡೆಗೆ ವೇದಿಕೆ ಸಿದ್ಧ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!