ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರ ಮಾತ್ರ ಇರಬೇಕು – ಗೀತಾ ಶಿವರಾಜ್​ಕುಮಾರ್​

ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು, ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಮಾಡಿದರೆ ಒಳ್ಳೆಯದು ಎಂದು ಗೀತಾ ಶಿವರಾಜ್​ ಕುಮಾರ್​ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಮೂಲಕ ಪಠ್ಯಪುಸ್ತಕದಿಂದ ಸಾವರ್ಕರ್​, ಹೆಗಡೆವಾರ್  ಮತ್ತು ಸೂಲಿಬೆಲೆ ಪಠ್ಯವನ್ನು ಕೈಬಿಟ್ಟಿರುವ ಕಾಂಗ್ರೆಸ್​ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಗೀತಾ ಶಿವರಾಜ್​ಕುಮಾರ್​ ಅವರ ಸಹೋದರ ಸೊರಬ ಶಾಸಕ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.

ಮಕ್ಕಳ ಅನುಕೂಲಕ್ಕೆ ಪಠ್ಯಕ್ರಮ ಬದಲಾಯಿಸಿದರೆ ತಪ್ಪೇನು..? ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು

ಎಂದು ಮೈಸೂರಲ್ಲಿ ಗೀತಾಶಿವರಾಜ್​ಕುಮಾರ್​ ಅವರು ಪ್ರತಿಕ್ರಿಯಿಸಿದ್ದಾರೆ.