ಅತಿಥಿ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿಯಷ್ಟು ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.
60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು.
ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸಲಾಗುತ್ತದೆ. ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಇವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರು ಘೋಷಿಸಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ 1 ರಜೆಯನ್ನು ನೀಡಲಾಗುತ್ತದೆ.
ಅತಿಥಿ ಉಪನ್ಯಾಸಕರು ತಾವು ನಡೆಸುತ್ತಿರುವ ಮುಷ್ಕರವನ್ನು ಹಿಂಪಡೆಯಬೇಕು. ಮುಷ್ಕರದಿಂದ ತೊಂದರೆಯಾಗುತ್ತಿದ್ದು, ಮುಷ್ಕರ ವಾಪಸ್ ಪಡೆಯದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ADVERTISEMENT
ADVERTISEMENT