BIG BREAKING: 10 ಸಾವಿರ ಕೋಟಿ ರೂ. ಹಗರಣ – ಯಡಿಯೂರಪ್ಪ, ಅಶ್ವತ್ಥ್​ ನಾರಾಯಣ್​ ವಿರುದ್ಧ ತನಿಖೆಗೆ ಪ್ರಧಾನಿ ಮೋದಿಗೆ HDK ಪತ್ರ

ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿರುವ 10 ಸಾವಿರ ಕೋಟಿ ರೂಪಾಯಿ ಮೊತ್ತದ ಹಗರಣದ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಸಿಎಂ ಆಗಿದ್ದ ಯಡಿಯೂರಪ್ಪ ಅವರ ಜೊತೆಗೆ ಸೇರಿಕೊಂಡು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್​ ಅಶ್ವತ್ಥ್​​ ನಾರಾಯಣ ಅವರು 10 ಸಾವಿರ ಕೋಟಿ ರೂಪಾಯಿ ಹಗರಣ ಎಸಗಿದ್ದಾರೆ ಎಂದು ಕುಮಾರಸ್ಬಾಮಿ ಪತ್ರದಲ್ಲಿ ಆರೋಪಿಸಿದ್ದಾರೆ.

ನಿಯಮಗಳನ್ನು ಬದಲಿಸಿ ಬಿಎಂಎಸ್​ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಬಿಎಂಎಸ್​​ ಟ್ರಸ್ಟ್​ನ್ನು ಉದ್ಯಮಿ ದಯಾನಂದ್​ ಪೈ ಅವರಿಗೆ ನೀಡಲಾಗಿದೆ. ಈ ಮೂಲಕ ಸರ್ಕಾರದ ಆಧೀನದಲ್ಲೇ ಇರಬೇಕಿದ್ದ 10 ಸಾವಿರ ಕೋಟಿ ರೂಪಾಯಿ ಮೊತ್ತದ ಆಸ್ತಿ ಖಾಸಗಿಯವರ ಪಾಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಹಗರಣ ಸಂಬಧ ಕಳೆದ ವರ್ಷದ ಸೆಪ್ಟಂಬರ್​ನಲ್ಲಿ ನಡೆದಿದ್ದ ಅಧಿವೇಶನದಲ್ಲೂ ಕುಮಾರಸ್ವಾಮಿ ಅವರು ಸುದೀರ್ಘ ಭಾಷಣ ಮಾಡಿದ್ದರು.

LEAVE A REPLY

Please enter your comment!
Please enter your name here