BIG BREAKING: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಟೋಲ್​ – ಹೈಕೋರ್ಟ್​ನಿಂದ ಸ್ವಯಂಪ್ರೇರಿತ ವಿಚಾರಣೆ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಟೋಲ್​ ಸಂಗ್ರಹ ಮತ್ತು ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳ ಸಂಬಂಧ ಕರ್ನಾಟಕ ಹೈಕೋರ್ಟ್​ನ ದ್ವಿಸದಸ್ಯ ಪೀಠ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ.

ಬೆಂಗಳೂರು-ಕನಕಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷತೆ ಕೊರತೆ ಸಂಬಂಧ 2022ರಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವೇಳೆ ಕರ್ನಾಟಕ ಹೈಕೋರ್ಟ್​ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಗೆ ನಿರ್ಧರಿಸಿದೆ.

ಹೈಕೋರ್ಟ್​ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಳೆ ಮತ್ತು ನ್ಯಾಯಮೂರ್ತಿ ಅಶೋಕ್​ ಎಸ್​ ಕಿನಗಿ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ಹೈಕೋರ್ಟ್​ ಪ್ರಶ್ನೆಗಳು:

ಬೆಂಗಳೂರು-ಮೈಸೂರು ನಡುವಿನ ಕಾಮಗಾರಿಯನ್ನು ಪೂರ್ತಿಗೊಳಿಸದೆಯೇ ಟೋಲ್​ ಸಂಗ್ರಹ ಆರಂಭಿಸಿರುವುದು,

ಟೋಲ್​ ಗೇಟ್​ನಲ್ಲಿ ವಾಹನ ತಡೆಗೋಸ್ಕರ ಬೂಮ್​ ಬ್ಯಾರಿಯರ್​ಗಳ ಅಸಮರ್ಪಕ ನಿರ್ವಹಣೆಯಿಂದ ವಾಹನಗಳಿಗೆ ಆಗಿರುವ ಹಾನಿ,

ಫಾಸ್ಟ್​ಟ್ಯಾಗ್​ನಲ್ಲಿ ಸಮಸ್ಯೆಯಿಂದಾಗಿ ನಗದು ಮೂಲಕ ಟೋಲ್​ ಕಟ್ಟಬೇಕಾದ ಸ್ಥಿತಿ ಬಗ್ಗೆ ಪತ್ರಿಕೆಗಳಲ್ಲಿನ ವರದಿಯನ್ನು ಆಧರಿಸಿ ಸ್ವಯಂಪ್ರೇರಿತ ವಿಚಾರಣೆಗೆ ತೀರ್ಮಾನಿಸಿದೆ.

ಟೋಲ್​ ಸಂಗ್ರಹಕ್ಕೂ ಮೊದಲು ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕೆಂಬ ಟೋಲ್​ ನಿಯಮಗಳ ಬಗ್ಗೆಯೂ ಹೈಕೋರ್ಟ್​ ವಿಚಾರಣೆ ವೇಳೆ ಪ್ರಸ್ತಾಪಿಸಿತು. 

ಟೋಲ್​ ಸಂಗ್ರಹಕ್ಕೂ ಮೊದಲು ಈ ಎಲ್ಲ ಪೂರ್ವಾಂಶಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಅನಿಸುತ್ತಿದೆ ಎಂದಿರುವ ಹೈಕೋರ್ಟ್​ ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ವಿಚಾರಣೆ ಅಗತ್ಯ ಎಂದು ಭಾವಿಸಿ ವಿಚಾರಣೆಯನ್ನು ಏಪ್ರಿಲ್​ 2ನೇ ವಾರಕ್ಕೆ ಮುಂದೂಡಿತು.

LEAVE A REPLY

Please enter your comment!
Please enter your name here