ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಬಸ್ ಕಂದಕಕ್ಕೆ ಉರುಳಿ ಈ ಭೀಕರ ಅಪಘಾತ ನಡೆದಿದೆ.
ಕುಲ್ಲು ಜಿಲ್ಲೆಯ ಜಂಗ್ಲಾ ಗ್ರಾಮದ ಸಮೀಪ ಸೋಮವಾರ ಬೆಳಿಗ್ಗೆ 8.30 ಕ್ಕೆ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ತಂಡಗಳು ಸ್ಥಳಕ್ಕೆ ತಲುಪಿವೆ. ಗಾಯಗೊಂಡವರನ್ನು ಶೀಘ್ರ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಜಿಲ್ಲೆಯ ಅಧಿಕೃತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತಕ್ಕೀಡಾದ ಈ ಬಸ್ನಲ್ಲಿ ಕನಿಷ್ಟ 40 ಜನ ವಿದ್ಯಾರ್ಥಿಗಳು ಇದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಅಪಘಾತದ ಬಗ್ಗೆ ಪ್ರಧಾನಿ ಕಾರ್ಯಾಲಯ ಕಂಬನಿ ಮಿಡಿದಿದ್ದು, ಅಪಘಾತದಲ್ಲಿ ಮಡಿದವರಿಗೆ 2 ಲಕ್ಷ ರೂ.ಗಳ ಪರಿಹಾರ ಧನ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಧನ ನೀಡಲಾಗುತ್ತದೆ ಎಂದು ಹೇಳಿದೆ.
The bus accident in Kullu, Himachal Pradesh is heart-rending. In this tragic hour my thoughts are with the bereaved families. I hope those injured recover at the earliest. The local administration is providing all possible assistance to those affected: PM @narendramodi
— PMO India (@PMOIndia) July 4, 2022