ತಾಯಿಯ ಹುಟ್ಟುಹಬ್ಬದಂದು ಕರೆ ಮಾಡಿ ಶುಭಾಷಯ ತಿಳಿಸಲು ಹಾಸ್ಟೆಲ್ನವರು ಫೋನ್ ಕರೆ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ 14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಅಘಾತಕಾರಿ ಘಟನೆ ಬರದಿಯಾಗಿದೆ.
ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ನಲ್ಲಿ ಜೂನ್ 12 ಭಾನುವಾರದಂದು ಈ ಘಟನೆ ನಡೆದಿದೆ. ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಈತ ಬೆಂಗಳೂರಿನ ಹೊಸಕೋಟೆ ಮೂಲದ ವಿದ್ಯಾರ್ಥಿಯಾಗಿದ್ದು, ಪಾಲಕರು ಇಲ್ಲಿ ಹಾಸ್ಟೆಲ್ನಲ್ಲಿ ಇರಿಸಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಆದರೆ, ಹಾಸ್ಟೆಲ್ನವರು ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಈ ವಿದ್ಯಾರ್ಥಿ ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.