ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಇಡೀ ಪ್ರದೇಶದಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಸ್ಕೂಟರ್ ಮಾಲೀಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಸೂಪರ್ ವೈಸರ್ ಆಗಿದ್ದು, ಹೇಗೋ ಅಪಾಯದಿಂದ ಪಾರಾಗಿದ್ದಾರೆ. ಸೀಟ್ ಅಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಬರುತ್ತಿರುವುದನ್ನು ಗಮನಿಸಿದ ಸತೀಶ್ ಕುಮಾರ್, ಸ್ಕೂಟರ್ ನಿಂದ ಸುರಕ್ಷಿತವಾಗಿ ಜಿಗಿದು, ಅವಘಡದಿಂದ ಪಾರಾಗಿದ್ದಾರೆ.
ಬೆಂಕಿಯ ಜ್ವಾಲೆ ಇಡೀ ಸ್ಕೂಟರ್ ಗೆ ಅವರಿಸುತ್ತಿದ್ದಂತೆಯೇ, ಸುತ್ತಮುತ್ತಲಿನವರು ಬೆಂಕಿ ನಂದಿಸಲು ಅವರಿಗೆ ನೆರವಾಗಿದ್ದಾರೆ. ಆದರೆ, ಸ್ಕೂಟರ್ ಬೆಂಕಿಗೆ ಆಹುತಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸತೀಶ್ ಕಳೆದ ವರ್ಷವಷ್ಟೇ ಈ ಸ್ಕೂಟರ್ ಖರೀದಿಸಿದ್ದರು.
ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಕಳೆದ ತಿಂಗಳು ವೆಲ್ಲೂರು ಜಿಲ್ಲೆಯಲ್ಲಿ ಇದೇ ತಿಂಗಳು ಘಟನೆ ಸಂಭವಿಸಿ, ತಂದೆ ಹಾಗೂ ಮಗಳು ಉಸಿರುಕಟ್ಟಿ ಸಾವನ್ನಪ್ಪಿದ್ದರು. ತಿರುಚಿರಪಳ್ಳಿ ಜಿಲ್ಲೆಯ ಮಾನಪ್ಪರೈ ಯಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.