ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಮತ್ತು ಈಗ ಮುಜುರಾಯಿ ಇಲಾಖೆ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ದಾಸರಿ ಅವರು ಮಾಜಿ ಸಚಿವ ಮತ್ತು ಕೆ ಆರ್ ನಗರ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಅವರ ಜೊತೆಗೆ ಸಂಧಾನಕ್ಕೆ ಯತ್ನಿಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಆಗಿರುವ ಮಣಿವಣ್ಣನ್ ಪಿ ಅವರ ಜೊತೆಗೆ ರೋಹಿಣಿ ಸಿಂಧೂರಿ ಅವರು ಸಾ ರಾ ಮಹೇಶ್ ಅವರನ್ನು ಭೇಟಿಯಾಗಿದ್ದಾರೆ.
ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲದ ಅಧಿವೇಶನದ ವೇಳೆ ರೋಹಿಣಿ ಸಿಂಧೂರಿ ಅವರು ಸಾರಾ ಮಹೇಶ್ ಅವರನ್ನು ಭೇಟಿ ಆಗಿದ್ದರು.
ಈ ಭೇಟಿಯ ಬಳಿಕ ಸಾ ರಾ ಮಹೇಶ್ ಅವರ ವಾಟ್ಸಾಪ್ಗೆ ರೋಹಿಣಿ ಸಿಂಧೂರಿ ಅವರು ಸಂದೇಶವನ್ನೂ ಕಳುಹಿಸಿದ್ದರು.
ನಿಮ್ಮ ಜಾಗದ ವಿಚಾರದ ಸರ್ವೆಗೆ ನಾನು ದಿಶಾ ಆ್ಯಪ್ ನೋಡಿ ಆದೇಶಿಸಿದ್ದೆ. ನಾನು ನನ್ನ ಕೆಲಸ ಮಾಡಿದ್ದೇನೆ. ದಯವಿಟ್ಟು ತಪ್ಪು ತಿಳಿಯಬೇಡಿ. ಇದು ಕೇವಲ ಕೆಲಸದ ವಿಚಾರವಷ್ಟೇ. ಇದರಲ್ಲಿ ವೈಯಕ್ತಿಕ ವಿಚಾರ ಏನೂ ಇಲ್ಲ