ಹುದ್ದೆಗಾಗಿ ಕಾಯುತ್ತಿದ್ದ ನವೀನ್ರಾಜ್ ಸಿಂಗ್ ಅವರನ್ನು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಉಜ್ವಲ್ ಕುಮಾರ್ ಘೋಷ್: ಬಿಬಿಎಂಪಿ (ಚುನಾವಣೆ) ವಿಶೇಷ ಆಯುಕ್ತರಾಗಿದ್ದ ಇವರನ್ನು ಭೂ ಸ್ವಾಧೀನ ಮತ್ತು ಪುರ್ನವಸತಿ ನಿಗಮ, ಬಾಗಲಕೋಟೆ ಇದರ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಹುದ್ದೆಗಾಗಿ ಕಾಯುತ್ತಿದ್ದ ಸುಷ್ಮಾ ಗೋಡ್ಬೋಲೆ ಇವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖ್ಯ ಪರೀಕ್ಷಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಯಶವಂತ್ ವಿ ಗುರ್ಕರ್: ಹುದ್ದೆಗಾಗಿ ಕಾಯುತ್ತಿದ್ದ ಇವರನ್ನು ಸ್ಮಾರ್ಟ್ ಆಡಳಿತ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ರಮೇಶ್ ಡಿ ಎಸ್: ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಇವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಪೊಮ್ಮಲ ಸುನಿಲ್ ಕುಮಾರ್: ಹುದ್ದೆಗಾಗಿ ಕಾಯುತ್ತಿದ್ದ ಇವರನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಡಾ ಸತೀಶ್ ಬಿ ಸಿ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಇವರನ್ನು ಆಡಳಿತಾತ್ಮಕ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಡಾ ಗೋಪಾಲಕೃಷ್ಣ ಹೆಚ್ ಎನ್: ಕರ್ನಾಟಕ ಪೌರಾಡಳಿತ ಡಾಟಾ ಸೊಸೈಟಿ ಇದರ ಜಂಟಿ ನಿರ್ದೇಶಕರಾಗಿದ್ದ ಇವರನ್ನು ಕಾರ್ಮಿಕ ಇಲಾಖೆ ಅಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಹುದ್ದೆಗಾಗಿ ಕಾಯುತ್ತಿದ್ದ ರವಿ ಕುಮಾರ್ ಎಂ ಆರ್ ಇವರನ್ನು ಮೈಸೂರು ಶುಗರ್ ಕಂಪನಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಮೀನಾ ನಟರಾಜನ್ ಸಿ ಎನ್: ಮಾಹಿತಿ ತಂತ್ರಜ್ಞಾನ ಇಲಾಖೆ ನಿರ್ದೇಶಕರಾಗಿದ್ದ ಇವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಡಾ ಆನಂದ್ ಕೆ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಆಗಿದ್ದ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಜಯವಿಭವಸ್ವಾಮಿ: ಚೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಇವರನ್ನು ಕರ್ನಾಟಕ ರಾಜ್ಯ ಗಣಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ.
ಪ್ರಭು ಜಿ: ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾಗಿದ್ದ ಇವರನ್ನು ತುಮಕೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಉಕೇಶ್ ಕುಮಾರ್: ಕೋಲಾರ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಇವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ADVERTISEMENT
ADVERTISEMENT