BIG BREAKING: ಇನಾಯತ್​ ಅಲಿಗೆ ಮಂಗಳೂರು ಉತ್ತರ ಕಾಂಗ್ರೆಸ್​ ಟಿಕೆಟ್​ ಅಂತಿಮ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದೆ. ಮಾರ್ಚ್​ 17ರಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ.

ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಇನಾಯತ್​ ಅಲಿ ಮುಲ್ಕಿ ಅವರಿಗೆ ಕಾಂಗ್ರೆಸ್​ ಟಿಕೆಟ್​ ಅಂತಿಮಗೊಳಿಸಿದೆ.

ಮಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಶಾಸಕ ಮೊಯಿದ್ದೀನ್​ ಬಾವಾ ಅವರು ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಹೊಸ ಮುಖವನ್ನು ಕಣಕ್ಕಿಳಿಸಲು ಕಾಂಗ್ರೆಸ್​ ತೀರ್ಮಾನಿಸಿದೆ.

ಇನಾಯತ್​ ಅಲಿ ಅವರು ಸದ್ಯ ಕರ್ನಾಟಕ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ. ಕಾಂಗ್ರೆಸ್​ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರು, ಕರ್ನಾಟಕ ಯುವ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.

2013ರಲ್ಲಿ ಮೊಯಿದ್ದೀನ್​ ಬಾವಾ ಅವರು ಈ ಕ್ಷೇತ್ರದಿಂದ ಗೆದ್ದಿದ್ದರು, ಆದ್ರೆ 2018ರಲ್ಲಿ ಬಿಜೆಪಿ ಶಾಸಕ ಭರತ್​ ಶೆಟ್ಟಿ ವಿರುದ್ಧ ಸೋತರು.

LEAVE A REPLY

Please enter your comment!
Please enter your name here